10 Milagres de Jesus na Bíblia: Lista com versículos e explicação
Os milagres de Jesus são muito mais do que demonstrações de poder sobrenatural; eles são sinais que confirmam sua divindade e missão. Ao longo dos Evangelhos, vemos Cristo curando enfermos, dominando a natureza e vencendo a morte.
Neste guia, selecionamos 10 milagres de Jesus na Bíblia, organizados com referências e uma breve explicação sobre o impacto espiritual de cada um deles.
Os principais milagres de Jesus nos Evangelhos
1. Transformação da Água em Vinho
Referência: João 2:1-11
Explicação: Ocorreu nas Bodas de Caná. Sendo o seu primeiro milagre público, Jesus demonstrou autoridade sobre a matéria e a natureza, revelando sua glória aos discípulos e abençoando a instituição da família.
ಯೇಸು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು. ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, "ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ," ಎಂದು ಯೇಸುವಿಗೆ ತಿಳಿಸಿದಳು.
ಯೇಸು ಆಕೆಗೆ, "ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ," ಎಂದು ಹೇಳಿದರು.
ಯೇಸುವಿನ ತಾಯಿಯು ಸೇವಕರಿಗೆ, "ಆತನು ನಿಮಗೆ ಹೇಳಿದಂತೆ ಮಾಡಿರಿ," ಎಂದು ಹೇಳಿದಳು.
ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.
ಯೇಸು ಸೇವಕರಿಗೆ, "ಆ ಬಾನೆಗಳಲ್ಲಿ ನೀರು ತುಂಬಿರಿ," ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
ಅನಂತರ ಯೇಸು ಅವರಿಗೆ, "ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ," ಎಂದರು.
ಸೇವಕರು ತೆಗೆದುಕೊಂಡು ಹೋದರು. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, "ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ," ಎಂದನು.
ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.
2. Cura do cego de nascença
Referência: João 9:1-12
Explicação: Jesus usa lodo para curar um homem que nunca havia enxergado. Este milagre prova que Ele é a Luz do Mundo e tem poder para restaurar o que nasceu com defeito.
ಯೇಸು ಸಬ್ಬತ್ ದಿನದಲ್ಲಿ ಹುಟ್ಟು ಕುರುಡನಿಗೆ ಕಣ್ಣು ಕೊಟ್ಟದ್ದು
ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು. ಯೇಸುವಿನ ಶಿಷ್ಯರು, "ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?" ಎಂದು ಅವರನ್ನು ಕೇಳಿದರು.
ಯೇಸು, "ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು. ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು. ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ," ಎಂದರು.
ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು. ಅವನಿಗೆ, "ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ," ಎಂದರು. ಸಿಲೋವ ಎಂದರೆ, "ಕಳುಹಿಸಲಾದವನು" ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.
ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, "ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?" ಎಂದರು. ಕೆಲವರು, "ಹೌದು, ಇವನೇ," ಎಂದರು.
ಇನ್ನೂ ಬೇರೆಯವರು, "ಇಲ್ಲಾ, ಇವನು ಅವನ ಹಾಗೆ ಇದ್ದಾನೆ," ಎಂದರು.
ಅವನಾದರೋ, "ನಾನೇ ಅವನು," ಎಂದು ಹೇಳಿದನು.
ಕೆಲವರು ಅವನಿಗೆ, "ಹಾಗಾದರೆ ನಿನಗೆ ದೃಷ್ಟಿ ಹೇಗೆ ಬಂತು?" ಎಂದು ಕೇಳಲು,
ಅವನು, "ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು," ಎಂದನು.
ಅವರು ಅವನಿಗೆ, "ಆತನು ಎಲ್ಲಿದ್ದಾನೆ?" ಎಂದು ಕೇಳಲು,
ಅವನು, "ನನಗೆ ಗೊತ್ತಿಲ್ಲ," ಎಂದನು.
3. Multiplicação dos pães e peixes
Referência: Mateus 14:13-21
Explicação: Com apenas cinco pães e dois peixes, Jesus alimentou mais de 5 mil homens. Este sinal revela Cristo como o Pão da Vida, aquele que supre todas as nossas necessidades.
ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು
ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು. ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.
ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, "ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು," ಎಂದರು.
ಆದರೆ ಯೇಸುವು, "ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ," ಎಂದು ಹೇಳಿದರು.
ಅವರು ಯೇಸುವಿಗೆ, "ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ," ಎಂದು ಉತ್ತರಕೊಟ್ಟರು.
ಯೇಸು, "ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ," ಎಂದರು. ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.
4. Jesus acalma a tempestade
Referência: Marcos 4:35-41
Explicação: Com uma ordem, o vento e o mar se aquietam. O milagre ensina sobre a paz que excede o entendimento e a autoridade do Messias sobre a criação.
ಯೇಸು ಬಿರುಗಾಳಿಯನ್ನು ಶಾಂತಗೊಳಿಸಿದ್ದು
ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, "ನಾವು ಆಚೆದಡಕ್ಕೆ ಹೋಗೋಣ," ಎಂದು ಹೇಳಿದರು. ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು. ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು. ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, "ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?" ಎಂದು ಕೇಳಿದರು.
ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, "ಸುಮ್ಮನಿರು, ಶಾಂತವಾಗು!" ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
ಯೇಸು ತಮ್ಮ ಶಿಷ್ಯರಿಗೆ, "ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?" ಎಂದರು.
ಶಿಷ್ಯರು ಭಯಭೀತರಾಗಿ, "ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!" ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
5. Cura da mulher com fluxo de sangue
Referência: Marcos 5:25-34
Explicação: Uma cura que aconteceu pelo toque da fé. Jesus mostra que está atento ao sofrimento individual e que a fé é o canal para receber o milagre.
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು. ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. ಏಕೆಂದರೆ, "ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು," ಎಂದುಕೊಂಡಿದ್ದಳು. ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, "ನನ್ನ ಉಡುಪನ್ನು ಮುಟ್ಟಿದವರು ಯಾರು?" ಎಂದು ಕೇಳಿದರು.
ಯೇಸುವಿನ ಶಿಷ್ಯರು ಅವರಿಗೆ, "ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?" ಎಂದರು.
ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು. ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು. ಯೇಸು ಆ ಸ್ತ್ರೀಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ," ಎಂದು ಹೇಳಿದರು.
6. Libertação do endemoninhado Gadareno
Referência: Marcos 5:1-20
Explicação: Jesus liberta um homem dominado por uma legião de espíritos. É a prova clara de sua autoridade absoluta sobre o reino das trevas.
ದೆವ್ವ ಪೀಡಿತನನ್ನು ಗುಣಪಡಿಸಿದ್ದು
ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು. ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು. ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ. ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ. ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ, ಮಹಾಶಬ್ದದಿಂದ ಆರ್ಭಟಿಸಿ, "ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!" ಎಂದು ಅರಚಿದನು. ಏಕೆಂದರೆ ಯೇಸು ಅವನಿಗೆ, "ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!" ಎಂದು ಹೇಳಿದ್ದರು.
ಅನಂತರ, ಯೇಸು ಅವನಿಗೆ, "ನಿನ್ನ ಹೆಸರೇನು?" ಎಂದು ಕೇಳಿದಾಗ,
"ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ," ಎಂದು ಹೇಳಿದನು. ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು. "ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ," ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು. ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು. ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು. ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು. ಯೇಸು ಅದಕ್ಕೊಪ್ಪದೆ ಅವನಿಗೆ, "ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು," ಎಂದರು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
7. Ressurreição da filha de Jairo
Referência: Marcos 5:21-43
Explicação: Jesus demonstra que a morte para Ele é como o sono. Ele restaura a vida de uma criança, trazendo esperança para uma família desesperada.
ಯಾಯೀರನ ಸತ್ತ ಮಗಳು ಮತ್ತು ರಕ್ತಸ್ರಾವ ರೋಗಿಯಾದ ಸ್ತ್ರೀ
ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು. ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು, "ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು," ಎಂದು ಬಹಳವಾಗಿ ಬೇಡಿಕೊಂಡನು. ಆಗ ಯೇಸು ಅವನೊಂದಿಗೆ ಹೋದರು.
ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು. ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು. ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. ಏಕೆಂದರೆ, "ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು," ಎಂದುಕೊಂಡಿದ್ದಳು. ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, "ನನ್ನ ಉಡುಪನ್ನು ಮುಟ್ಟಿದವರು ಯಾರು?" ಎಂದು ಕೇಳಿದರು.
ಯೇಸುವಿನ ಶಿಷ್ಯರು ಅವರಿಗೆ, "ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?" ಎಂದರು.
ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು. ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು. ಯೇಸು ಆ ಸ್ತ್ರೀಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ," ಎಂದು ಹೇಳಿದರು.
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, "ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?" ಎಂದರು.
ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, "ಭಯಪಡಬೇಡ ನಂಬಿಕೆ ಮಾತ್ರ ಇರಲಿ," ಎಂದರು.
ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ. ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು. ಯೇಸು ಮನೆಯೊಳಗೆ ಹೋಗಿ, "ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ," ಎಂದರು. ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು.
ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು. ಯೇಸು ಆಕೆಯ ಕೈಹಿಡಿದು, "ತಲಿಥಾ ಕೂಮ್!" ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, "ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!" ಎಂಬುದು. ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು. ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.
8. Jesus anda sobre as águas
Referência: Mateus 14:22-33
Explicação: Ao caminhar sobre o Mar da Galileia, Jesus mostra que não está sujeito às leis da física. O episódio também serve para tratar a fé e a dúvida no coração de Pedro.
ಯೇಸು ನೀರಿನ ಮೇಲೆ ನಡೆದದ್ದು
ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು. ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು. ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು. ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, "ಅದು ಭೂತ," ಎಂದು ಭೀತಿಯಿಂದ ಕೂಗಿಕೊಂಡರು.
ಯೇಸು ತಕ್ಷಣವೇ ಅವರಿಗೆ, "ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ," ಎಂದರು.
ಆಗ ಪೇತ್ರನು ಯೇಸುವಿಗೆ, "ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ," ಎಂದನು.
ಅದಕ್ಕೆ ಯೇಸು, "ಬಾ," ಎಂದರು.
ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು. ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, "ಸ್ವಾಮಿ, ನನ್ನನ್ನು ಕಾಪಾಡಿರಿ!" ಎಂದು ಕೂಗಿ ಹೇಳಿದನು.
ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, "ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?" ಎಂದರು.
ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು. ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, "ನಿಜವಾಗಿಯೂ ನೀವು ದೇವಪುತ್ರ," ಎಂದು ಹೇಳಿದರು.
9. Cura do paralítico
Referência: Marcos 2:1-12
Explicação: Jesus cura o corpo, mas primeiro perdoa os pecados. Este milagre estabelece que sua missão principal é a reconciliação espiritual do homem com Deus.
ಯೇಸು ಪಾರ್ಶ್ವವಾಯು ರೋಗಿಯನ್ನು ಗುಣಪಡಿಸಿದ್ದು
ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು. ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು. ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು. ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, "ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ," ಎಂದರು.
ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು, "ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?" ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.
ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ? ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ? ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು," ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ," ಎಂದರು. ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, "ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!" ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
10. Ressurreição de Lázaro
Referência: João 11:1-44
Explicação: O milagre mais impactante antes da crucificação. Ao ressuscitar alguém morto há quatro dias, Jesus declara: "Eu sou a ressurreição e a vida".
ಲಾಜರನ ಮರಣ
ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. ಆದ್ದರಿಂದ ಅವನ ಸಹೋದರಿಯರು, "ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ," ಎಂದು ಯೇಸುವಿಗೆ ಹೇಳಿ ಕಳುಹಿಸಿದರು.
ಯೇಸು ಅದನ್ನು ಕೇಳಿ, "ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು," ಎಂದು ಹೇಳಿದರು. ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು. ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು. ತರುವಾಯ ಯೇಸು ತಮ್ಮ ಶಿಷ್ಯರಿಗೆ, "ನಾವು ತಿರುಗಿ ಯೂದಾಯಕ್ಕೆ ಹೋಗೋಣ," ಎಂದರು.
ಯೇಸುವಿನ ಶಿಷ್ಯರು ಅವರಿಗೆ, "ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?" ಎಂದರು.
ಯೇಸು, "ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ. ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ," ಎಂದು ಉತ್ತರಕೊಟ್ಟರು.
ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, "ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು," ಎಂದರು.
ಯೇಸುವಿನ ಶಿಷ್ಯರು, "ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು," ಎಂದರು. ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.
ಆಗ ಯೇಸು ಸ್ಪಷ್ಟವಾಗಿ ಅವರಿಗೆ, "ಲಾಜರನು ಸತ್ತುಹೋಗಿದ್ದಾನೆ. ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ," ಎಂದು ಹೇಳಿದರು.
ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, "ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ," ಎಂದನು.
ಮಾರ್ಥ, ಮರಿಯಳನ್ನು ಯೇಸು ಸಂತೈಸಿದ್ದು
ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು. ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು. ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು. ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.
ಆಗ ಮಾರ್ಥಳು ಯೇಸುವಿಗೆ, "ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ. ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು," ಎಂದಳು.
ಯೇಸು ಆಕೆಗೆ, "ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು," ಎಂದು ಹೇಳಿದರು.
ಮಾರ್ಥಳು ಯೇಸುವಿಗೆ, "ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು," ಎಂದು ಹೇಳಿದಳು.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು. ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?" ಎಂದು ಕೇಳಿದ್ದಕ್ಕೆ,
ಆಕೆಯು ಯೇಸುವಿಗೆ, "ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ," ಎಂದಳು.
ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, "ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ," ಎಂದಳು. ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು. ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು. ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.
ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, "ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ," ಎಂದು ಹೇಳಿದಳು.
ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ, "ಅವನನ್ನು ಎಲ್ಲಿ ಸಮಾಧಿಮಾಡಿದ್ದೀರಿ?" ಎಂದು ಕೇಳಿದರು.
ಅವರು ಯೇಸುವಿಗೆ, "ಸ್ವಾಮೀ, ಬಂದು ನೋಡಿರಿ," ಎಂದರು.
ಯೇಸು ಕಣ್ಣೀರಿಟ್ಟರು.
ಆಗ ಯೆಹೂದ್ಯರು, "ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ," ಎಂದರು.
ಅವರಲ್ಲಿ ಕೆಲವರು, "ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?" ಎಂದರು.
ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು
ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು. ಯೇಸು, "ಆ ಕಲ್ಲನ್ನು ತೆಗೆದುಹಾಕಿರಿ," ಎಂದರು.
ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, "ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ," ಎಂದಳು.
ಯೇಸು ಆಕೆಗೆ, "ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?" ಎಂದರು.
ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, "ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು," ಎಂದರು.
ಯೇಸು ಹೀಗೆ ಹೇಳಿದ ಮೇಲೆ, "ಲಾಜರನೇ, ಹೊರಗೆ ಬಾ," ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು. ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು.
ಯೇಸು ಅಲ್ಲಿದ್ದವರಿಗೆ, "ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ," ಎಂದು ಹೇಳಿದರು.
Conclusão
Os milagres de Jesus revelam sua autoridade sobre a natureza, as enfermidades, o mundo espiritual e até a morte. Eles não são apenas demonstrações de poder, mas sinais que apontam para sua identidade e missão.
Ao estudar esses milagres, é possível compreender melhor o papel de Jesus e a mensagem central do Evangelho.
Se este conteúdo ajudou você a entender os milagres de Jesus na Bíblia, compartilhe este artigo para que mais pessoas também conheçam esses ensinamentos.