Admiração
O temor do Senhor é o princípio da sabedoria. A admiração reverente por Deus é a postura que produz conhecimento, obediência e bênção na vida do crente.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು,
ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ಯೆಹೋವನ ಭಯವೇ ಜ್ಞಾನಕ್ಕೆ ಮೂಲವು,
ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
ಯೆಹೋವನ ಭಯವೇ ಜ್ಞಾನೋಪದೇಶ,
ಗೌರವಕ್ಕೆ ಮೊದಲು ವಿನಯ.
ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ
ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ;
ಗರ್ವ, ಅಹಂಭಾವ, ದುರ್ಮಾರ್ಗತನ,
ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ಧನ, ಮಾನ ಮತ್ತು ಜೀವಗಳು
ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
ನೀನೇ ಬುದ್ಧಿವಂತನು ಎಂದೆಣಿಸದೆ,
ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ,
ಎಲುಬುಗಳಿಗೆ ಸಾರವೂ ಉಂಟಾಗುವವು.
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ,
ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
ವಿಷಯವು ತೀರಿತು,
ಎಲ್ಲವೂ ಕೇಳಿ ಮುಗಿಯಿತು,
ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು,
ಮನುಷ್ಯರೆಲ್ಲರ ಕರ್ತವ್ಯವು ಇದೇ.
ಯೆಹೋವನ ಭಯವೇ ಜ್ಞಾನಕ್ಕೆ ಮೂಲ;
ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು.
ಆತನ ಸ್ತುತಿಯು ನಿರಂತರವಾದದ್ದು.
ಭಕ್ತರ ಧನ್ಯತೆ
ಯೆಹೋವನಿಗೆ ಸ್ತೋತ್ರ!
ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
ಭಕ್ತನ ಭಾಗ್ಯ
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ;
ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ.
ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ಯೆಹೋವನ ಭಯಭಕ್ತಿ
ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ;
ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.