Admiração
O temor do Senhor é o princípio da sabedoria. A admiração reverente por Deus é a postura que produz conhecimento, obediência e bênção na vida do crente.
ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ.
ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.
ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು.
ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ.
ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ.
ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.
ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ
ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.
ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ;
ಗರ್ವ, ಅಹಂಕಾರ, ಕೆಟ್ಟನಡವಳಿಕೆ,
ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.
ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ,
ಐಶ್ವರ್ಯವೂ ಮಾನವೂ ಜೀವವೂ ಆಗಿದೆ.
ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ;
ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.
ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು;
ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.
ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ.
ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
ಈಗ ನಾವು ಎಲ್ಲಾ ವಿಷಯವನ್ನೂ
ಕೇಳಿ ಮುಗಿಯಿತು.
ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು.
ಇದೇ ಮನುಷ್ಯನ ಪ್ರಮುಖ ಕರ್ತವ್ಯ.
ಯೆಹೋವ ದೇವರ ಭಯವು ಜ್ಞಾನದ ಮೂಲವು;
ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು;
ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.
ಯೆಹೋವ ದೇವರನ್ನು ಸ್ತುತಿಸಿರಿ.
ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ
ಸಂತೋಷಿಸುವವರು ಧನ್ಯರು.
ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ
ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ,
ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.
ದೇವರು ನಮ್ಮನ್ನು ಆಶೀರ್ವದಿಸುವರು.
ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.
ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.
ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ. ನಾನು ಈ ಹೊತ್ತು ನಿಮ್ಮ ಮೇಲಿಗಾಗಿ ನಿಮಗೆ ಆಜ್ಞಾಪಿಸುವ ಯೆಹೋವ ದೇವರ ಆಜ್ಞೆಗಳನ್ನೂ ಅವರ ನಿಮಯಗಳನ್ನೂ ಕಾಪಾಡುವುದೇ ಹೊರತು, ಮತ್ತೇನೂ ನಮ್ಮ ದೇವರಾಗಿರುವ ಯೆಹೋವ ದೇವರು ನಿಮ್ಮಿಂದ ಕೇಳುತ್ತಾರೆ?
ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.
ಸೂಲಗಿತ್ತಿಯರು ದೇವರಿಗೆ ಭಯಪಟ್ಟದ್ದರಿಂದ, ದೇವರು ಅವರ ಕುಟುಂಬಕ್ಕೆ ಅಭಿವೃದ್ಧಿಯನ್ನು ಉಂಟುಮಾಡಿದರು.
ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.
ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.
"ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ,
ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.