Ajuda ao próximo
Ajudar o próximo é mandamento de Deus e expressão prática da fé. A Bíblia ensina que a fé sem obras é morta — e que servir ao menor dos irmãos é servir a Cristo.
ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ. ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.
"ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು? ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು.
"ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.
ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.
ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು," ಎಂದರು.
ಆಗ ಜನರು, "ಹಾಗಾದರೆ ನಾವೇನು ಮಾಡಬೇಕು?" ಎಂದು ಕೇಳಿದರು.
ಅದಕ್ಕೆ ಯೋಹಾನನು ಉತ್ತರವಾಗಿ, "ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ," ಎಂದು ಹೇಳಿದನು.
ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ. ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು," ಎಂದು ಹೇಳಿದರು.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.
ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ," ಎಂದನು.
ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು. ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು. "ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ," ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.
ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.
ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.
ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.
ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.
ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ, ನಿಮ್ಮಲ್ಲಿ ಒಬ್ಬನು ಅವನಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ, "ಸಮಾಧಾನದಿಂದ ಹೋಗಿರಿ, ಚಳಿ ಕಾಯಿಸಿಕೊಳ್ಳಿರಿ, ಹೊಟ್ಟೆ ತುಂಬಿಸಿಕೊಳ್ಳಿರಿ," ಎಂದು ಹೇಳಿದರೆ ಪ್ರಯೋಜನವೇನು? ಅದರಂತೆಯೇ, ಕ್ರಿಯೆಗಳಿಲ್ಲದ ನಂಬಿಕೆಯು, ಕ್ರಿಯೆಗಳು ಇಲ್ಲದಿರುವುದರಿಂದ ಸತ್ತ ನಂಬಿಕೆಯಾಗಿರುತ್ತದೆ.
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?
ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ;
ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.
ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.