Aliança
A aliança é o modo como Deus se relaciona com seu povo. Da aliança com Noé à Nova Aliança em Cristo, Deus se compromete com amor e fidelidade irrevogáveis.
Alianças com Israel
Deus firmou aliança com Abraão, Moisés e Davi. No arco-íris, na lei, nas promessas — Ele é o Deus da aliança.
ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ, "ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು. ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ" ಎಂದು ಹೇಳಿದನು.
ದೇವರು ಪುನಃ ಹೇಳಿದ್ದೇನಂದರೆ, "ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ" ಎಂದು ಹೇಳಿದನು.
ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, "ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ, ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ, ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ," ಎಂದು ವಾಗ್ದಾನ ಮಾಡಿದನು.
ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ, "ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ, ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು. ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು" ಎಂದನು.
ಇದಲ್ಲದೆ ದೇವರು ಅಬ್ರಹಾಮನಿಗೆ, "ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು. ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ. ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ. ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
ಒಡಂಬಡಿಕೆಯ ನವೀಕರಣ
ಯೆಹೋವನು ಹೇಳಿದ್ದೇನೆಂದರೆ, "ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
Alianças renovadas
O povo renovava a aliança diante do Senhor. A fidelidade de Deus permanece mesmo quando o povo falha.
ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು. ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು. ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.
ಯೆಹೋಯಾದಾವನಿಂದ ಧಾರ್ಮಿಕ ಸುಧಾರಣೆ
ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, "ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?" ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, "ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ" ಎಂದು ಉತ್ತರಕೊಟ್ಟನು.
ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ" ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು, ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.
ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ, "ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ. ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು. ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ" ಎಂದು ಹೇಳಿದನು.
ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.
ಯೆಹೋವನು ಆರೋನನ ಕೋಲನ್ನು ಚಿಗುರಿಸಿದ್ದು
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, "ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು. ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು. ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’" ಎಂದನು.
ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು. ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು. ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು! ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
ತರುವಾಯ ಯೆಹೋವನು ಮೋಶೆಗೆ, "ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು" ಎಂದು ಆಜ್ಞಾಪಿಸಿದನು. ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.
ಏಹೂದ
ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು. ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
Nova Aliança
Eis que dias vêm em que farei nova aliança. Jesus é mediador de uma aliança superior, fundamentada em melhores promessas.
ಯೆಹೋವನು ತನ್ನ ಜನರೊಂದಿಗೆ ಮಾಡಿಕೊಳ್ಳುವ ಹೊಸ ಒಡಂಬಡಿಕೆ
ಯೆಹೋವನು ಇಂತೆನ್ನುತ್ತಾನೆ, "ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ. ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ" ಎಂಬುದೇ.
"ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ, ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.
ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ. ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.
Fidelidade da aliança
A aliança de Deus é eterna. Ele não quebra seu pacto nem altera o que saiu dos seus lábios.
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,
ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
ಆತನ ನಿಬಂಧನೆಗಳನ್ನು ಕೈಕೊಂಡು,
ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ
ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ;
"ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ,
ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ" ಎಂದು ಯೆಹೋವನು ಹೇಳುತ್ತಾನೆ.
"‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.
ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು."
ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು. ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.
ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು. ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.
ಯೋಬನು ತನ್ನ ನಿರ್ದೋಷದ ಬಗ್ಗೆ ಮಾತನಾಡಿದ್ದು
"ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು
ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,
ವಿವೇಕವು ನಿನ್ನನ್ನು ಜಾರಳಿಂದ ಅಂದರೆ
ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.
ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ,
ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.