Alimento
O alimento é provisão de Deus para o corpo e a alma. Jesus disse: Eu sou o pão da vida. A Bíblia ensina a receber com gratidão, partilhar com generosidade e confiar no Provedor.
O pão da vida
Jesus disse: Eu sou o pão da vida. Quem vem a mim nunca terá fome. O alimento espiritual sacia plenamente.
ಯೇಸು ಅವರಿಗೆ, "ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ," ಎಂದರು.
ಅದಕ್ಕೆ ಯೇಸು, "ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’" ಎಂದರು.
ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು,
ಅವರು ತೃಪ್ತಿಹೊಂದುವರು.
ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
"ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.
Provisão divina
Deus provê alimento em abundância. Ele multiplica pães e peixes, enche os famintos e supre toda necessidade.
ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ,
ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.
ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?" ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.
ಉದಾರಿಯು ಅಭಿವೃದ್ಧಿ ಹೊಂದುವನು;
ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.
ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ,
ಎಲುಬುಗಳಿಗೆ ಕ್ಷೇಮವೂ ಆಗಿವೆ.
ಇದಲ್ಲದೆ ಎಜ್ರನು ಅವರಿಗೆ, "ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ," ಎಂದು ಹೇಳಿದನು.
Gratidão e moderação
Nada trouxemos para o mundo e nada levaremos. Tudo o que fizerdes, fazei para a glória de Deus — inclusive comer e beber.
ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.
ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು. ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.
ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.
ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ. ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.
ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.
ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ನೀವು ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು. ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ.
ದೇವರು, "ಇಗೋ, ಭೂಮಿಯ ಮೇಲಿರುವ ಬೀಜಬಿಡುವ ಸಕಲ ಸಸ್ಯಗಳನ್ನೂ ಬೀಜಬಿಡುವ ಸಕಲ ಹಣ್ಣಿನ ಮರಗಳನ್ನೂ ನಿಮಗೆ ಕೊಟ್ಟಿದ್ದೇನೆ. ಅವು ನಿಮಗೆ ಆಹಾರಕ್ಕಾಗಿರುವುವು.
ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
"ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು.
ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.