Ano novo
O Ano Novo é oportunidade de renovação e consagração. A Bíblia convida a esquecer o que ficou para trás e avançar em fé, confiança e esperança em Deus.
ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ, ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
ಬಿರುದಿಗಾಗಿ ಓಟ
ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ. ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ, ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ. ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;
ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;
ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ;
ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು. ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.
ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
"ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ" ಎನ್ನುವವರೇ ಕೇಳಿರಿ. ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು "ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು" ಎಂದು ಹೇಳಬೇಕು. ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ. ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.