Ano novo
O Ano Novo é oportunidade de renovação e consagração. A Bíblia convida a esquecer o que ficou para trás e avançar em fé, confiança e esperança em Deus.
ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ. ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.
ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ. ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ. ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.
ಪೌಲನ ಮಾದರಿಯನ್ನು ಅನುಸರಿಸುವುದು
ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ಸಜೀವ ನಿರೀಕ್ಷೆಗಾಗಿ ದೇವರಿಗೆ ಸ್ತೋತ್ರ
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
ಯೆಹೋವ ದೇವರ ಮುಂದೆ ಶಾಂತನಾಗಿರು;
ಮೌನವಾಗಿದ್ದು ಅವರಿಗಾಗಿ ಎದುರು ನೋಡು;
ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ.
ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.
ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ;
ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.
ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.
ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.
ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ. ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.
ನಾಳೆಯನ್ನು ಕುರಿತು ಕೊಚ್ಚಿಕೊಳ್ಳುವುದು
"ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು, ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ," ಎನ್ನುವವರೇ ಕೇಳಿರಿ. ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಆದ್ದರಿಂದ, "ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!" ಎಂದು ನೀವು ಹೇಳುವುದೇ ಸರಿ. ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ. ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.