Arca de noé
A arca de Noé é história de salvação e fidelidade. Deus instruiu Noé a construir a arca para salvar sua família e os animais do dilúvio — exemplo supremo de obediência e fé.
ಆಗ ದೇವರು ನೋಹನಿಗೆ, "ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ. ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು. ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
ಜಲಪ್ರಳಯ
ಆಗ ಯೆಹೋವನು ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು. ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು. ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.
ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು. ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.
ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು. ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು. ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು. ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು. ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು. ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
ಆಗ ದೇವರು ನೋಹನಿಗೆ, "ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ; ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ" ಎಂದು ಹೇಳಿದನು.
ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ, "ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು. ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ" ಎಂದು ಹೇಳಿದನು.
ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು. ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು. ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು. ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು. ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು. ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.