Arrependimento
O arrependimento é a porta da graça. A Bíblia declara que Deus não deseja a morte do ímpio, mas que se converta e viva. Arrependei-vos, pois o Reino dos Céus está próximo.
Chamado ao arrependimento
Arrependei-vos, porque o Reino dos Céus está próximo. Quem se arrepende e confessa encontra restauração e perdão.
ಅಂದಿನಿಂದ ಯೇಸು, "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಬೋಧಿಸತೊಡಗಿದರು.
ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.
ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ," ಎಂದು ಹೇಳಿದರು.
"ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ," ಎಂದು ಹೇಳಿದರು.
ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.
ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು," ಎಂದರು.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.
A graça do arrependimento
Os que eu amo, eu repreendo e disciplino. Arrepende-te! Deus não quer que nenhum se perca — mas que todos cheguem ao arrependimento.
ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.
ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು. ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು. ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು. ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು. ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ,
"ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು. ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು. ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ," ಎಂದು ಹೇಳಿದರು.
ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು. ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, "ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ, ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ," ಎಂದು ವಿಜ್ಞಾಪನೆ ಮಾಡಿದನು. ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು. ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು. ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ. ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.
ನಿಮ್ಮ ಬಟ್ಟೆಗಳನ್ನಲ್ಲ,
ನಿಮ್ಮ ಹೃದಯಗಳನ್ನು ಹರಿದುಕೊಂಡು,
ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ.
ಅವರು ದಯೆಯೂ ಕರುಣೆಯೂ,
ದೀರ್ಘಶಾಂತಿಯೂ ಮಹಾ ಪ್ರೀತಿಯೂ
ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.
ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:
"ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ. ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ. ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ?
"ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು."
ದಾರ್ಯಾವೆಷನ ಎರಡನೆಯ ವರ್ಷದಲ್ಲಿ, ಹನ್ನೊಂದನೆಯ ತಿಂಗಳಾದ ಶೇಬಾಟ್ ಎಂಬ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:
ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.
ಆಗ ನಾನು, "ನನ್ನ ಒಡೆಯನೇ, ಇವೇನು?" ಎಂದೆನು.
ಆಗ ನನ್ನ ಸಂಗಡ ಮಾತನಾಡಿದ ದೇವದೂತನು, "ಇವೇನೆಂದು ನಿನಗೆ ತೋರಿಸುತ್ತೇನೆ," ಎಂದನು.
ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, "ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು," ಎಂದನು.
ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಯೆಹೋವ ದೇವರ ದೂತನಿಗೆ, "ಭೂಮಿಯ ಸುತ್ತಲೂ ನಡೆದಾಡಿದ್ದೇವೆ. ಇಗೋ, ಭೂಮಿಯೆಲ್ಲಾ ನಿಶ್ಚಿಂತೆಯಿಂದ ಶಾಂತವಾಗಿದೆ," ಎಂದನು.
ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: "ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?" ಎಂದನು. ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.
ನನ್ನ ಸಂಗಡ ಮಾತನಾಡಿದ ದೂತನು ನನಗೆ, "ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ. ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.
"ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
"ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು."
ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು. ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, "ಇದೇನು?" ಎಂದೆನು.
ಅದಕ್ಕೆ ಅವನು ನನಗೆ ಉತ್ತರಕೊಟ್ಟು, "ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು," ಎಂದನು.
ಆಗ ಯೆಹೋವ ದೇವರು ನನಗೆ ನಾಲ್ಕು ಕಮ್ಮಾರರನ್ನು ತೋರಿಸಿದರು. ನಾನು, "ಇವರು ಏನು ಮಾಡುವುದಕ್ಕೆ ಬರುತ್ತಾರೆ?" ಎಂದೆನು.
ಅದಕ್ಕೆ ಅವರು, "ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ," ಎಂದು ಹೇಳಿದರು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.
ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ!
ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ,
ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.
Confissão e restauração
Se confessarmos, Ele é fiel e justo. Há alegria no céu por um pecador que se arrepende — o arrependimento abre o caminho da vida.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.
ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ," ಎಂದರು.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.