Autocontrole
O autocontrole é fruto do Espírito e virtude indispensável. A graça de Deus nos ensina a renunciar à impiedade e a viver com sobriedade, domínio próprio e piedade no mundo presente.
Fruto e virtude
O domínio próprio é fruto do Espírito. Acrescentai ao conhecimento o autocontrole. A disciplina interior produz maturidade.
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ, ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
Dominar a si mesmo
Melhor é quem domina o seu espírito do que quem toma uma cidade. A cidade sem muros é quem não tem autocontrole.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ,
ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು
ಗೋಡೆ ಬಿದ್ದ ಹಾಳೂರಿಗೆ ಸಮಾನ.
ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು,
ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ,
ನಿನ್ನ ಕಾಲನ್ನು ಕೇಡಿಗೆ ದೂರಮಾಡು.
ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು,
ಜಾಣನು ಅವಮಾನವನ್ನು ಮರೆಮಾಡುವನು.
ಜೀವ ಮತ್ತು ಮರಣಗಳು ನಾಲಿಗೆಯ ವಶ,
ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವ ವಿಧಾನ
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
ಯೋಬನು ತನ್ನ ನಿರ್ದೋಷದ ಬಗ್ಗೆ ಮಾತನಾಡಿದ್ದು
"ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು
ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,
ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.