Bom ânimo
Tende bom ânimo! Jesus repetiu estas palavras aos seus discípulos em meio às tempestades. No mundo tereis aflições, mas Ele já venceu o mundo — e nos dá coragem para enfrentar tudo.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ಆಗ ಅವನು ಅವರಿಗೆ "ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು" ಎಂದು ಹೇಳಿದನು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.
ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ;
ನಿಮ್ಮ ಹೃದಯವು ಧೈರ್ಯದಿಂದಿರಲಿ.
ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;
ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ಕೂಡಲೆ ಯೇಸು ಮಾತನಾಡಿ ಅವರಿಗೆ, "ಧೈರ್ಯವಾಗಿರಿ ನಾನೇ ಭಯಪಡಬೇಡಿರಿ" ಎಂದು ಹೇಳಿದನು.
ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, "ಧೈರ್ಯವಾಗಿರಿ, ನಾನೇ, ಹೆದರಬೇಡಿರಿ" ಎಂದು ಹೇಳಿದನು.
ಯೇಸು ಆಕೆಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು" ಎಂದು ಹೇಳಿದನು.
ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ
ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
"ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ,
ನಿನ್ನ ಬಲವೂ ಇಕ್ಕಟ್ಟೇ.
ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
ನೀತಿವಂತರ ರಕ್ಷಣೆ ಯೆಹೋವನಿಂದಲೇ;
ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.
ಅದಕ್ಕೆ ಜನರು, "ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ. ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.