Consolador
O Espírito Santo é o Consolador prometido por Jesus. Ele consola os aflitos, fortalece os fracos e nos assegura que nunca estaremos sós.
O Consolador prometido
Jesus prometeu: Eu rogarei ao Pai e Ele vos dará outro Consolador para que fique convosco para sempre.
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.
"ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
Consolo divino
Bendito seja o Deus de toda consolação. Ele nos consola em toda tribulação e enxuga toda lágrima de nossos olhos.
ಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದು
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ,
ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;
ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು." ಎಂದು ಹೇಳಿದರು.
ನಾನೇ, ನಾನೇ ನಿನ್ನನ್ನು ಸಂತೈಸುವವನು.
ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.