Corpo
O corpo é templo do Espírito Santo. A Bíblia ensina a cuidar do corpo com responsabilidade, moderação e respeito — honrando a Deus com nosso ser integral.
Templo do Espírito
Vosso corpo é templo do Espírito Santo. Glorificai a Deus no vosso corpo — ele não é vosso, foi comprado por preço.
ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ. ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.
ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.
ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.
ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ, ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.
Cuidar do corpo
O exercício físico é proveitoso, mas a piedade tem promessa para a vida presente e futura. Cuide do corpo com sabedoria.
ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.
ಹರ್ಷಹೃದಯವು ಒಳ್ಳೆಯ ಔಷಧ;
ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ,
ಎಲುಬುಗಳಿಗೆ ಕ್ಷೇಮವೂ ಆಗಿವೆ.
ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ;
ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.
ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು;
ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ;
ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.
ನನ್ನ ತನುಮನಗಳು ಕುಂದುತ್ತವೆ;
ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ,
ನನ್ನ ಪಾಲೂ ಆಗಿದ್ದಾರೆ.
ದೇವರೇ, ನನ್ನ ದೇವರು ನೀವೇ,
ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ.
ನಾನು ನಿಮಗಾಗಿ ದಾಹಗೊಂಡಿದ್ದೇನೆ.
ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ
ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ.
ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.
Corpo e espírito
O espírito está pronto, mas a carne é fraca. Não vos preocupeis com o corpo — a vida é mais do que alimento.
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ," ಎಂದು ಹೇಳಿದರು.
ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.
"ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, "ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ. ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ. ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
"ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ. ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
"ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು. ಆದರೆ ಯಾರು ಜನರ ಮುಂದೆ ನನ್ನನ್ನು ಅಲ್ಲಗಳೆಯುವರೋ ಅವರನ್ನು ದೇವದೂತರ ಮುಂದೆ ನಾನು ಅಲ್ಲಗಳೆಯುವೆನು. ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
"ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ, ಆ ಸಮಯದಲ್ಲಿ ನೀವು ಹೇಳಬೇಕಾದದ್ದನ್ನು ಪವಿತ್ರಾತ್ಮರು ನಿಮಗೆ ಕಲಿಸಿಕೊಡುವರು."
ಗುಂಪಿನಲ್ಲಿದ್ದ ಒಬ್ಬನು ಯೇಸುವಿಗೆ, "ಬೋಧಕರೇ, ಆಸ್ತಿಯನ್ನು ಭಾಗಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳಿ," ಎಂದನು.
ಯೇಸು, "ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?" ಎಂದು ಹೇಳಿದರು. ಅನಂತರ ಯೇಸು ಜನರಿಗೆ, "ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ," ಎಂದರು.
ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: "ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು. ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು,
"ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ. ಅಲ್ಲದೆ, ನಾನು ನನ್ನ ಪ್ರಾಣಕ್ಕೆ, "ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ," ’ ಎಂದುಕೊಂಡನು.
"ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.
"ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು," ಎಂದರು.
ಯೇಸು ತಮ್ಮ ಶಿಷ್ಯರಿಗೆ: "ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು. ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ! ನಿಮ್ಮಲ್ಲಿ ಯಾರಾದರೂ ಚಿಂತೆ ಮಾಡುವುದರಿಂದ ತಮ್ಮ ಜೀವನಾವಧಿಗೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ? ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?
"ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ. ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ? ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ. ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ. ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.
"ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ. ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ. ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು," ಎಂದು ಹೇಳಿದರು.
"ನೀವು ವಸ್ತ್ರ ಧರಿಸಿ ಸೇವೆಗೆ ಸಿದ್ಧರಾಗಿರಿ. ನಿಮ್ಮ ದೀಪಗಳು ಉರಿಯುತ್ತಿರಲಿ, ನೀವಂತೂ ಮದುವೆಯ ಔತಣದಿಂದ ಹಿಂದಿರುಗುವ ತಮ್ಮ ಯಜಮಾನನಿಗಾಗಿ ಕಾಯುತ್ತಿದ್ದು, ಅವನು ಬಂದು ಬಾಗಿಲನ್ನು ತಟ್ಟಿದ ತಕ್ಷಣವೇ ಅವನಿಗಾಗಿ ತೆರೆಯುವ ಸೇವಕರಂತೆ ಇರಿ. ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು. ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು. ಆದರೆ, ಕಳ್ಳನು ಯಾವ ಸಮಯದಲ್ಲಿ ಬರುವನೆಂಬುದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಪ್ರವೇಶಿಸಲು ಕನ್ನಾಹಾಕಲು ಬಿಡುತ್ತಿರಲಿಲ್ಲ ಎಂಬುದನ್ನು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ," ಎಂದು ಹೇಳಿದರು.
ಪೇತ್ರನು ಯೇಸುವಿಗೆ, "ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?" ಎಂದು ಕೇಳಿದನು.
ಕರ್ತದೇವರು ಹೇಳಿದ್ದೇನೆಂದರೆ, "ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು? ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು. ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ, ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.
"ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು. ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು."
"ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವುದಕ್ಕಾಗಿ ಬಂದೆನು, ಅದು ಈಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ! ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ! ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ. ಹೇಗೆಂದರೆ ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯಲ್ಲಿ ಇಬ್ಬರಿಗೆ ವಿರೋಧವಾಗಿ ಮೂವರೂ ಮೂವರಿಗೆ ವಿರೋಧವಾಗಿ ಇಬ್ಬರೂ ವಿಭಾಗವಾಗುವರು. ತಂದೆಗೆ ವಿರೋಧವಾಗಿ ಮಗನು, ಮಗನಿಗೆ ವಿರೋಧವಾಗಿ ತಂದೆಯು, ತಾಯಿಗೆ ವಿರೋಧವಾಗಿ ಮಗಳು, ಮಗಳಿಗೆ ವಿರೋಧವಾಗಿ ತಾಯಿಯು, ಅತ್ತೆಗೆ ವಿರೋಧವಾಗಿ ಸೊಸೆಯು, ಸೊಸೆಗೆ ವಿರೋಧವಾಗಿ ಅತ್ತೆಯು ವಿಭಾಗವಾಗುವರು."
ಯೇಸು ಜನಸಮೂಹಕ್ಕೆ ಹೇಳಿದ್ದೇನೆಂದರೆ: "ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡಿ, ‘ಮಳೆ ಬರುತ್ತದೆ ಎನ್ನುತ್ತೀರಿ,’ ಹಾಗೆಯೇ ಆಗುವುದು. ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ. ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?
"ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ? ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು. ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ," ಎಂದರು.
ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು.
ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು.
ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.
União e harmonia
O corpo é um só, mas tem muitos membros. Cristo é a cabeça; a paz de Cristo governe em vossos corações.
ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,
ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.
ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
ಆಗ ಮನುಷ್ಯನು ಹೀಗೆ ಹೇಳಿದನು:
"ಇದು ನನ್ನ ಎಲುಬಿನಿಂದಾದ ಎಲುಬು
ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ.
ಈಕೆ ನರನಿಂದ ತೆಗೆದಿರುವುದರಿಂದ,
ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು."
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.
ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, "ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು."
ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.