Despedida
As despedidas na Bíblia são momentos sagrados de bênção, oração e confiança em Deus. Mesmo na separação, os filhos de Deus se despedem com fé, carinho e esperança de reencontro.
Despedidas bíblicas
Paulo se despediu dos anciãos de Éfeso com oração e lágrimas. As despedidas entre irmãos são marcadas por afeto e fé.
ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು. ಬಳಿಕ ಪೌಲನು; "ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ" ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.
ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ
ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
ಪೌಲನು ಥೆಸಲೋನಿಕದವರನ್ನು ನೋಡುವುದಕ್ಕೆ ಆಸೆಪಟ್ಟದ್ದು
ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.
Amizades profundas
Davi e Jônatas se despediram com lágrimas e pacto de amizade. Rute se apegou a Noemi com lealdade inabalável.
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು. ಅನಂತರ ಯೋನಾತಾನನು ದಾವೀದನಿಗೆ, "ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ" ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
ಅವರಿಗೆ, "ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ. ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ" ಎಂದು ಹೇಳಿ ಅವರಿಗೆ ಮುದ್ದಿಟ್ಟಳು. ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು, ಆಕೆಯು, "ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ. ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ, ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ" ಅಂದಳು. ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.
ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.
ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.
Bênçãos de despedida
O Senhor te abençoe e te guarde. O Senhor faça resplandecer o seu rosto sobre ti e te dê a paz.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು;
ನಿನ್ನ ಪ್ರಾಣವನ್ನು ಕಾಯುವನು.
ನೀನು ಹೋಗುವಾಗಲೂ, ಬರುವಾಗಲೂ,
ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
ಕಡೆ ಮಾತುಗಳು
ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
ಕಡೆ ಮಾತುಗಳು
ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
ದೇವರ ಸರ್ವಾಯುಧಗಳು
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.
ಇನ್ನೊಬ್ಬನು ಸಹ, "ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು" ಅಂದನು. ಯೇಸು ಅವನಿಗೆ, "ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ" ಎಂದು ಹೇಳಿದನು.
ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, "ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು" ಅಂದನು. ಅದಕ್ಕೆ ಎಲೀಯನು "ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?" ಎಂದು ಉತ್ತರಕೊಟ್ಟನು. ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.