Deus nos chamou
Deus nos chamou antes da fundação do mundo. Ele nos conhece pelo nome, nos predestinou para sermos conforme a imagem de Cristo e nos capacita para o chamado.
Chamados por Deus
Os que Deus predestinou, também os chamou. O Seu chamado é irrevogável — fundamentado no propósito eterno e na graça abundante.
ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ. ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು. ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.
ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ. ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.
ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು. ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು. ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.
"ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ
ಮುಂಚೆಯೇ ನಿನ್ನನ್ನು ತಿಳಿದಿದ್ದೆನು.
ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು;
ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ."
A resposta ao chamado
Ninguém pode vir a mim se o Pai não o atrair. Deus escolheu os fracos para confundir os fortes — e nos chamou para a luz.
ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
ಪ್ರಿಯರೇ, ನೀವು ದೇವರ ಕರೆಯನ್ನು ಹೊಂದಿದಾಗ ಏನಾಗಿದ್ದಿರೆಂಬುದನ್ನು ಆಲೋಚಿಸಿರಿ. ನಿಮ್ಮೊಳಗೆ ಲೋಕಾನುಸಾರವಾಗಿ ಜ್ಞಾನಿಗಳೂ ಅನೇಕರಿಲ್ಲ, ಪ್ರಭಾವಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.
ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು. ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ. ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು," ಎಂದನು.
Confirmando o chamado
Procurai tornar cada vez mais firme a vossa vocação. Deus começou a boa obra e a completará até o dia de Cristo.
ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ. ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.
ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.
"ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ," ಎಂದನು.