Dificuldades
As dificuldades são parte da vida, mas Deus é refúgio certo em todo tempo de angústia. A Bíblia promete que nenhuma adversidade pode separar os filhos de Deus do seu amor.
Deus é refúgio
Deus é nosso refúgio e fortaleza, socorro bem presente nas angústias. Nada poderá nos separar do amor de Cristo.
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಆದುದರಿಂದ ಭೂಮಿಯು ಮಾರ್ಪಟ್ಟರೂ,
ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ,
ನಮಗೇನೂ ಭಯವಿಲ್ಲ.
ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು?
ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
ನಾನು ಯೆಹೋವನಿಗೆ, "ನೀನೇ ನನ್ನ ಶರಣನು, ನನ್ನ ದುರ್ಗವು,
ನಾನು ಭರವಸವಿಟ್ಟಿರುವ ನನ್ನ ದೇವರು" ಎಂದು ಹೇಳುವೆನು.
ಜನರೇ, ಯಾವಾಗಲೂ ಆತನನ್ನೇ ನಂಬಿ,
ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
ದೇವರು ನಮ್ಮ ಆಶ್ರಯವು. ಸೆಲಾ
ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು;
ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,
ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
ಆತನು ಬಿರುಗಾಳಿಯನ್ನು ಶಾಂತಪಡಿಸಿದನು;
ತೆರೆಗಳು ನಿಂತವು.
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? "ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು." ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
Provisão nas dificuldades
O Senhor provê mesmo nos tempos mais difíceis. Ele sustentou Elias, protegeu Israel e cuida dos seus com fidelidade eterna.
ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು,
ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.
ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು;
ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.
ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು,
ಅರಣ್ಯದಲ್ಲಿ ನದಿಯಾಗಿ ಹರಿಯಿತು.
ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;
ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ,
ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ;
ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ;
ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು,
ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ,
ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು
ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
Força nas provas
Em tudo somos atribulados, mas não esmagados. O Senhor é bom e é fortaleza no dia da angústia — Ele conhce os seus.
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.
ಯೆಹೋವನು ತನ್ನ ಪ್ರಜೆಯನ್ನು ಬಾಧಿಸುವವರಿಗೆ ಮಾಡುವ ದಂಡನೆ
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು,
ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು.
ತನ್ನ ಸಿಂಹಾಸನಕ್ಕೆ ಮರೆಯಾಗಿ,
ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು.
ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ,
ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.
ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ;
ವಿನಾಶವುಂಟಾದರೂ ನೀನು ಹೆದರುವುದಿಲ್ಲ.
ಆತನು ಅವರಿಗೆ, "ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?" ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು. ಆ ಜನರು ಬೆರಗಾಗಿ, "ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ" ಅಂದರು.
ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.
ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.