Doença
A doença é realidade humana que a Bíblia confronta com compaixão e poder. Jesus curou toda enfermidade e prometeu ouvir a oração da fé pelos enfermos.
Jesus, o curador
Jesus percorreu toda a Galileia curando toda enfermidade e doença entre o povo. Pelo seu nome, curas continuam acontecendo.
ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು
ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು. ಇದರಿಂದ "ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು" ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
ಯೇಸು ಅದನ್ನು ಕೇಳಿ ಅವರಿಗೆ, "ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು" ಅಂದನು.
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದು
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು, ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
Promessas de cura
Eu sou o Senhor que te sara. As Escrituras prometem cura para o corpo e para a alma aos que confiam em Deus.
ಯೆಹೋವನು ಅವರಿಗೆ, "ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ" ಎಂದನು.
ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
ಪ್ರವಾದಿಯ ವಿಜ್ಞಾಪನೆ
ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು.
ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,
ಸಮಸ್ತ ರೋಗಗಳನ್ನು ವಾಸಿಮಾಡುವವನೂ,
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,
ಅವರ ಗಾಯಗಳನ್ನು ಕಟ್ಟುತ್ತಾನೆ.
ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.
ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ.
ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
ರೋಗ ಮತ್ತು ಶತ್ರುಬಾಧಿತನ ಮೊರೆ
ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು;
ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು;
ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು;
ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ,
ಯೆಹೋವನು ಅವನನ್ನು ಉದ್ಧರಿಸುವನು;
ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
Oração pelos doentes
A oração da fé salvará o enfermo. Confessai as ofensas uns aos outros e orai uns pelos outros para serdes curados.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ ಅದಕ್ಕಾತನು, "ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ" ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
Esperança na aflição
Ele tomou sobre si as nossas enfermidades. Mesmo na doença, o coração alegre serve de bom remédio e Deus dá esperança.
ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,
ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
ಹರ್ಷಹೃದಯವು ಒಳ್ಳೆಯ ಔಷಧ,
ಕುಗ್ಗಿದ ಮನದಿಂದ ಅನಾರೋಗ್ಯ.
ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು,
ಆತ್ಮವೇ ನೊಂದರೆ ಸಹಿಸುವವರು ಯಾರು?
ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು,
ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,
ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.