Domínio próprio
O domínio próprio é fruto do Espírito e marca de maturidade espiritual. A Bíblia ensina que quem governa o próprio espírito é melhor do que quem conquista uma cidade.
Fruto do Espírito
O fruto do Espírito inclui domínio próprio. A graça de Deus nos ensina a viver de maneira sóbria e justa neste mundo.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ. ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸೋದರ ಸ್ನೇಹವನ್ನೂ ಸೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
Governar a si mesmo
Melhor é o que domina o seu espírito do que o que toma uma cidade. A cidade sem muros é o homem sem domínio próprio.
ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ,
ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
ತನ್ನ ಸ್ವಂತ ಆತ್ಮವನ್ನು ಆಳದಿರುವವನು,
ಗೋಡೆ ಬಿದ್ದ ಹಾಳೂರಿಗೆ ಸಮಾನ.
ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು.
ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.
ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ.
ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.
ಶಿಸ್ತಿನ ಜೀವನದ ಅವಶ್ಯಕತೆ
ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ. ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ. ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ. ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.
ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.
ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.
Disciplina e vigilância
Sede sóbrios e vigilantes. O diabo anda em derredor como leão rugidor. A sobriedade nos protege e fortalece.
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.
ದೇವರಿಗಾಗಿ ಬಾಳುವುದು
ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು. ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು. ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ. ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು.
ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.
O senhorio de Cristo
Todo domínio pertence a Cristo. Ele é Senhor dos senhores e Rei dos reis — e nos capacita a viver em santidade.
ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು.
ಅವರ ಎಲ್ಲಾ ಸೃಷ್ಟಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.
ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು.
ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ;
ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು.
ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ.
ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.
"ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.
ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.
ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು!
ಅವರ ಅದ್ಭುತಗಳು ಪರಾಕ್ರಮವಾದವುಗಳು!
ಅವರ ರಾಜ್ಯವು ನಿತ್ಯವಾದ ರಾಜ್ಯವು,
ಅವರ ಆಡಳಿತವು ತಲತಲಾಂತರಕ್ಕೂ ಇರುವುದು.
ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ಆ ಮಗನನ್ನು ನಮಗಾಗಿ ಕೊಡಲಾಗಿದೆ.
ಆಡಳಿತವು ಅವರ ಬಾಹುವಿನ ಮೇಲಿರುವುದು,
ಅದ್ಭುತವಾದವರು ಸಮಾಲೋಚಕರು,
ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ,
ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ
ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು,
ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ
ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು,
ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು
ಇದನ್ನು ನೆರವೇರಿಸುವುದು.
ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು. ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.
ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.
ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು. ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.
ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.
ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.
ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.
ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು. ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು. ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.
"ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ;
ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.