Ensinar
Ensinar é mandamento e dom. A Bíblia exorta pais, líderes e mestres a transmitir a verdade divina com fidelidade, paciência e sabedoria para as próximas gerações.
Ensinar a Palavra
Toda Escritura é útil para ensinar. Quem ouve as palavras de Jesus e as pratica é como o homem sábio que construiu sobre a rocha.
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
"ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.
ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು,
ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ,
ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.
ಈ ನುಡಿಗಳು ಮೂಢರಿಗೆ ಜಾಣತನವನ್ನೂ,
ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು,
ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು,
ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
Instruir as gerações
Ensina a criança nos caminhos de Deus. A geração que não conhece o Senhor perde a herança espiritual da fé.
ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,
ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,
ಕೊರಳಿಗೆ ಹಾರದಂತಿರುವುದು.
ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,
ತಾಯಿಯ ಉಪದೇಶವನ್ನು ಬಿಡಬೇಡ.
ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ,
ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು,
ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು,
ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
ಆಜ್ಞೆಯೇ ದೀಪ, ಉಪದೇಶವೇ ಬೆಳಕು,
ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ,
ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು,
ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ,
ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು,
ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ,
ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
ದುಷ್ಟರ ಮಾರ್ಗದಲ್ಲಿ ಸೇರಬೇಡ,
ಕೆಟ್ಟವರ ದಾರಿಯಲ್ಲಿ ನಡೆಯಬೇಡ.
ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ,
ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು,
ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
ನೆಟ್ಟಗೆ ದೃಷ್ಟಿಸು,
ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
ನೀನು ನಡೆಯುವ ದಾರಿಯನ್ನು ಸಮಮಾಡು,
ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.
ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ,
ನಿನ್ನ ಕಾಲನ್ನು ಕೇಡಿಗೆ ದೂರಮಾಡು.
ಜ್ಞಾನಿಯ ಬೋಧನೆ ಜೀವದ ಬುಗ್ಗೆ,
ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.
ಯೆಹೋವನ ಭಯವೇ ಜ್ಞಾನಕ್ಕೆ ಮೂಲವು,
ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ;
ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.
ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು.
ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು,
ಅವರ ಸಂತಾನದವರಿಗೆ ಮರೆಮಾಡದೆ,
ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,
ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
Fidelidade no ensino
Quem ensina com fidelidade merece dupla honra. Cuidado com doutrinas falsas — permaneçam na doutrina de Cristo.
ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. "ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು," ಮತ್ತು "ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ" ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.
ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು. ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, "ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?" ಎಂದರು. ಅದಕ್ಕೆ ಯೇಸು "ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ. ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು. ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.