Ensinar
Ensinar é mandamento e dom. A Bíblia exorta pais, líderes e mestres a transmitir a verdade divina com fidelidade, paciência e sabedoria para as próximas gerações.
Ensinar a Palavra
Toda Escritura é útil para ensinar. Quem ouve as palavras de Jesus e as pratica é como o homem sábio que construiu sobre a rocha.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
"ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.
ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.
ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.
ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ;
ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;
ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು
ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;
ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ
ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.
ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ;
ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.
ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು
ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.
ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ.
ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.
Instruir as gerações
Ensina a criança nos caminhos de Deus. A geração que não conhece o Senhor perde a herança espiritual da fé.
ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.
ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು,
ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.
ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ.
ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.
ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ.
ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ.
ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.
ಆಜ್ಞೆಯೇ ದೀಪವಾಗಿದೆ,
ಬೋಧನೆಯೇ ಬೆಳಕಾಗಿದೆ;
ಶಿಕ್ಷಣದ ತಿದ್ದುವಿಕೆಗಳು
ಜೀವ ಮಾರ್ಗವಾಗಿವೆ.
ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು;
ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.
ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು;
ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.
ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು;
ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.
ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು;
ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು.
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ;
ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.
ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು
ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ;
ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ;
ಕೆಟ್ಟ ಮಾತುಗಳು ನಿನ್ನ ತುಟಿಗಳಿಂದ ದೂರವಿರಲಿ.
ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ;
ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ.
ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ;
ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ.
ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ;
ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.
ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ
ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.
ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು.
ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ.
ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ;
ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.
ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು.
ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ.
ನಮ್ಮ ಪಿತೃಗಳು ನಮಗೆ ವಿವರಿಸಿದರು.
ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ
ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು.
ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.
ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
Fidelidade no ensino
Quem ensina com fidelidade merece dupla honra. Cuidado com doutrinas falsas — permaneçam na doutrina de Cristo.
ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. ಏಕೆಂದರೆ, "ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!" ಎಂತಲೂ, "ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!" ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.
ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅವರ ಬೋಧನೆ ಮಾರಕ ಹುಣ್ಣಿನಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.
ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು. ಯೆಹೂದ್ಯರು ಆಶ್ಚರ್ಯಪಟ್ಟು, "ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?" ಎಂದರು.
ಅದಕ್ಕೆ ಯೇಸು ಅವರಿಗೆ, "ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ. ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು. ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.