Esperar no Senhor
Esperar no Senhor é ato de fé e confiança. A Bíblia promete que os que esperam em Deus renovam as forças, recebem direção e experimentam a fidelidade divina no tempo certo.
Renovar as forças
Os que esperam no Senhor renovam as forças. Sobem como águias, correm e não se cansam, caminham e não se fatigam.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಯೆಹೂದ್ಯರ ಮುಂದಿನ ವಿಧೇಯತೆ ಮತ್ತು ಸುಸ್ಥಿತಿಯೂ
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು;
ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
ನಿನ್ನ ಹೃದಯವು ಧೈರ್ಯದಿಂದಿರಲಿ;
ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು
ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
ನಿನ್ನ ಹೃದಯವು ಧೈರ್ಯದಿಂದಿರಲಿ;
ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಗಂಡಾಂತರದಲ್ಲಿ ಭಕ್ತನ ನಂಬಿಕೆ
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು
ನನ್ನನ್ನು ನುಂಗಿಬಿಡಬೇಕೆಂದು ಬಂದು,
ತಾವೇ ನೆಲಕ್ಕೆ ಬಿದ್ದುಹೋದರು.
ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ;
ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ,
ಭರವಸವುಳ್ಳವನಾಗಿಯೇ ಇರುವೆನು.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,
ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ
ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು
ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;
ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು;
ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ,
ನನ್ನ ತಲೆ ಎತ್ತಲ್ಪಟ್ಟಿರುವುದು;
ನಾನು ಯೆಹೋವನ ಗುಡಾರದಲ್ಲಿ,
ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು.
ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ;
ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.
"ನನ್ನ ಸಾನ್ನಿಧ್ಯಕ್ಕೆ ಬಾ" ಎಂಬ ನಿನ್ನ ಮಾತಿಗೆ,
ನಾನು, "ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು" ಎಂದು ಉತ್ತರಕೊಟ್ಟೆನು.
ನನಗೆ ವಿಮುಖನಾಗಿರಬೇಡ;
ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ.
ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ;
ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.
ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;
ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;
ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ;
ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.
ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು
ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
ನಿನ್ನ ಹೃದಯವು ಧೈರ್ಯದಿಂದಿರಲಿ;
ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
Espera paciente
Esperei com paciência no Senhor e Ele se inclinou para mim. Confie nele e descanse — Ele agirá no tempo certo.
ರಕ್ಷಣೆಗಾಗಿ ಪ್ರಾರ್ಥಿಸುವುದು
ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;
ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;
ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ,
ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;
ಅದು ನಮ್ಮ ದೇವರ ಸ್ತೋತ್ರವೇ.
ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು
ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
ಯಾರು ಅಹಂಕಾರಿಗಳ ಜೊತೆಯಲ್ಲಿಯೂ,
ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ,
ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು?
ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ,
ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ;
ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ;
ಅವು ಅಸಂಖ್ಯಾತವಾಗಿವೆ.
ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ;
ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ.
ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
ಆಗ ನಾನು, "ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು;
ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ" ಅಂದೆನು.
ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು,
ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು;
ಯೆಹೋವನೇ, ನೀನೇ ಬಲ್ಲೆ.
ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ;
ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು;
ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;
ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ;
ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ,
ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ,
ನಾನು ಎದೆಗುಂದಿ ಹೋದೆನು.
ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು;
ಯೆಹೋವನೇ, ಬೇಗನೆ ಬಂದು ಸಹಾಯಮಾಡು.
ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು,
ಆಶಾಭಂಗಪಟ್ಟು ಅವಮಾನಹೊಂದಲಿ;
ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.
ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ;
ನಮ್ಮ ಸಹಾಯವೂ, ಗುರಾಣಿಯೂ ಆತನೇ.
ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು;
ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ;
ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
ನಾನು ಯೆಹೋವನನ್ನು ಎದುರುನೋಡುತ್ತೇನೆ;
ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;
ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,
ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು.
ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು;
ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು;
ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
Confiança e perseverança
Confie no Senhor de todo o coração. Sede pacientes na tribulação — o Senhor é fiel e cumprirá todas as suas promessas.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ
ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;
ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು
ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
"ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು."
ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
ಹತ್ತುಮಂದಿ ಕನ್ಯೆಯರ ಸಾಮ್ಯ
"ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು. ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.