Esperar no Senhor
Esperar no Senhor é ato de fé e confiança. A Bíblia promete que os que esperam em Deus renovam as forças, recebem direção e experimentam a fidelidade divina no tempo certo.
Renovar as forças
Os que esperam no Senhor renovam as forças. Sobem como águias, correm e não se cansam, caminham e não se fatigam.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು.
ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು.
ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ.
ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು;
ಅವರು ನಿನ್ನ ಹೃದಯವನ್ನು ದೃಢಪಡಿಸುವರು;
ಯೆಹೋವ ದೇವರಿಗಾಗಿ ಕಾದಿರು.
ಇದೊಂದು ನನ್ನ ಭರವಸೆಯಾಗಿರುವುದು:
ನಾನಂತೂ ಯೆಹೋವ ದೇವರ ಒಳಿತನ್ನು
ಜೀವಿತರ ದೇಶದಲ್ಲಿ ಕಾಣುವೆನು.
ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು;
ಅವರು ನಿನ್ನ ಹೃದಯವನ್ನು ದೃಢಪಡಿಸುವರು;
ಯೆಹೋವ ದೇವರಿಗಾಗಿ ಕಾದಿರು.
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
ದುಷ್ಟರು ನನ್ನನ್ನು ಬೀಳಿಸಬೇಕೆಂದು
ನನಗೆ ವಿರೋಧವಾಗಿ ಸಮೀಪಿಸುವಾಗ,
ನನ್ನ ವೈರಿಗಳು
ತಾವೇ ಎಡವಿಬಿದ್ದರು.
ನನಗೆ ವಿರೋಧವಾಗಿ ಇಳಿದರೂ
ನನ್ನ ಹೃದಯವು ಭಯಪಡದು;
ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ
ನಾನು ಭರವಸೆಯಿಂದಿರುವೆನು.
ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ,
ಅದರ ದಯೆಯನ್ನು ನೋಡುತ್ತಾ
ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ
ಇರಬೇಕೆಂಬ ಒಂದೇ ವರವನ್ನು
ಯೆಹೋವ ದೇವರಿಂದ ಕೇಳಿಕೊಂಡು
ಅದನ್ನೇ ಹುಡುಕುತ್ತಿರುವೆನು.
ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು
ತಮ್ಮ ಗುಡಾರದಲ್ಲಿ ಬಚ್ಚಿಡುವರು.
ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು.
ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.
ಈಗ ನನ್ನ ತಲೆಯು ನನ್ನ ಸುತ್ತಲಿರುವ
ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು,
ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು;
ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.
ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ;
ನನ್ನನ್ನು ಕರುಣಿಸಿ ಉತ್ತರವನ್ನು ಕೊಡಿರಿ.
ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: "ದೇವರ ಮುಖವನ್ನು ಹುಡುಕು,"
ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.
ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ;
ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ;
ನೀವೇ ನನಗೆ ಸಹಾಯಕರಾಗಿದ್ದೀರಿ;
ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ.
ನನ್ನನ್ನು ಬಿಟ್ಟುಬಿಡಬೇಡಿರಿ.
ನನ್ನ ತಂದೆತಾಯಂದಿರು ನನ್ನನ್ನು ಬಿಟ್ಟುಬಿಟ್ಟರೂ,
ಯೆಹೋವ ದೇವರು ನನ್ನನ್ನು ಸೇರಿಸಿಕೊಳ್ಳುವರು.
ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ;
ನನ್ನ ವಿರೋಧಿಗಳ ನಿಮಿತ್ತ
ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.
ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ;
ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ
ನನಗೆ ವಿರೋಧವಾಗಿ ಎದ್ದಿದ್ದಾರೆ.
ಇದೊಂದು ನನ್ನ ಭರವಸೆಯಾಗಿರುವುದು:
ನಾನಂತೂ ಯೆಹೋವ ದೇವರ ಒಳಿತನ್ನು
ಜೀವಿತರ ದೇಶದಲ್ಲಿ ಕಾಣುವೆನು.
ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು;
ಅವರು ನಿನ್ನ ಹೃದಯವನ್ನು ದೃಢಪಡಿಸುವರು;
ಯೆಹೋವ ದೇವರಿಗಾಗಿ ಕಾದಿರು.
Espera paciente
Esperei com paciência no Senhor e Ele se inclinou para mim. Confie nele e descanse — Ele agirá no tempo certo.
ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು;
ಅವರು ನನ್ನ ಕಡೆಗೆ ತಿರುಗಿ, ನನ್ನ ಮೊರೆಯನ್ನು ಕೇಳಿದರು.
ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು.
ಕೆಸರಿನ ಮಣ್ಣಿನಿಂದ ಎಬ್ಬಿಸಿದರು.
ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ,
ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.
ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ,
ಆ ಹಾಡು ನಮ್ಮ ದೇವರ ಸ್ತೋತ್ರವೇ.
ಅನೇಕರು ಇದನ್ನು ಕಂಡು,
ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು.
ಯೆಹೋವ ದೇವರನ್ನು ತನ್ನ ಭರವಸೆಯಾಗಿ ಮಾಡಿಕೊಂಡು
ಅಹಂಕಾರಿಗಳನ್ನು ಗೌರವಿಸದೆಯೂ
ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳದೆಯೂ
ಇರುವ ಮನುಷ್ಯನು ಧನ್ಯನು.
ನನ್ನ ದೇವರಾದ ಯೆಹೋವ ದೇವರೇ,
ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ!
ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ,
ನಿಮಗೆ ಸರಿಸಾಟಿ ಯಾರೂ ಇಲ್ಲ.
ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ,
ಅವು ಎಣಿಸಲು ಅಸಾಧ್ಯ.
ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ.
ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ.
ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.
ಆಗ ನಾನು, "ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ.
ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.
ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ;
ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ."
ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು;
ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು
ನೀವೇ ತಿಳಿದಿದ್ದೀರಿ.
ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ.
ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ
ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ
ನಾನು ಮರೆಮಾಡದೆ ಸಾರಿದೆನು.
ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ;
ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ.
ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ;
ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ,
ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.
ಯೆಹೋವ ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ.
ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.
ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು
ನಾಚಿಕೆಪಟ್ಟು ಗಲಿಬಿಲಿಯಾಗಲಿ.
ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ
ಹಿಂಜರಿದು ಅವಮಾನ ಹೊಂದಲಿ.
ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ;
ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ.
ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ;
ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.
ನಾವು ನಿಮ್ಮನ್ನು ನಿರೀಕ್ಷಿಸುವ ಪ್ರಕಾರ, ಯೆಹೋವ ದೇವರೇ,
ನಿಮ್ಮ ಒಡಂಬಡಿಕೆಯ ಪ್ರೀತಿಯು ನಮ್ಮ ಮೇಲೆ ಇರಲಿ.
ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ;
ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ.
ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ
ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.
ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ.
ನನ್ನ ನಿರೀಕ್ಷೆಯು ದೇವರಿಂದಲೇ.
ಯೆಹೋವ ದೇವರನ್ನು ನಿರೀಕ್ಷಿಸು;
ಅವರ ಮಾರ್ಗದಲ್ಲಿ ನಡೆ;
ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು;
ದುಷ್ಟರ ವಿನಾಶವನ್ನು ನೀವು ಕಾಣುವಿರಿ.
Confiança e perseverança
Confie no Senhor de todo o coração. Sede pacientes na tribulação — o Senhor é fiel e cumprirá todas as suas promessas.
ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.
ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,
ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು.
ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.
ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.
"ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ.
ಹುಲ್ಲು ಒಣಗಿಹೋಗುವುದು.
ಅದರ ಹೂವು ಉದುರಿ ಹೋಗುವುದು.
ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು."
ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.
ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
"ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು. ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.
"ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು.
"ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು. ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.
"ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.
"ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.
"ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು.
"ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.
"ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.