O Espírito Santo
O Espírito Santo é a terceira pessoa da Trindade — Consolador, Mestre e Poder. Ele convence do pecado, guia em toda verdade, distribui dons e produz frutos na vida do cristão.
O Consolador prometido
Jesus prometeu enviar o Consolador — o Espírito da Verdade — que estaria para sempre com os discípulos e os guiaria em toda verdade.
ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.
ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು. ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು. ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು," ಎಂದು ಹೇಳಿದರು.
ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, "ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?" ಎಂದು ಕೇಳಿದನು.
ಯೇಸು ಅವನಿಗೆ, "ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.
"ನಾನು ಇನ್ನೂ ನಿಮ್ಮೊಡನೆ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.
"ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು. ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.
ಯೇಸು ಅವನಿಗೆ, "ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.
ಯೇಸು ಅವನಿಗೆ, "ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ. ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ. ‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.
O derramamento do Espírito
No Pentecostes, o Espírito desceu como fogo sobre os discípulos. Desde então, todos os que creem recebem o Espírito.
ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು. ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.
ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ," ಎಂದರು.
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ," ಎಂದರು.
ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ," ಎಂದರು.
ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, "ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ," ಎಂದರು.
ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು. ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.
Dons do Espírito
A cada um é concedida a manifestação do Espírito para o bem de todos. Os dons são diversos, mas o Espírito é o mesmo.
ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ. ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು, ಒಬ್ಬನಿಗೆ ಅದೇ ಆತ್ಮನಿಂದ ನಂಬಿಕೆಯು, ಮತ್ತೊಬ್ಬನಿಗೆ ಅದೇ ಆತ್ಮನಿಂದ ರೋಗ ವಾಸಿಮಾಡುವ ವರಗಳು ಕೊಡಲಾಗಿವೆ. ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ. ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಚಿತ್ತಾನುಸಾರ ಪ್ರತಿಯೊಬ್ಬನಿಗೂ ಹಂಚಿಕೊಡುತ್ತಾರೆ.
ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, "ಯೇಸು ಶಾಪಗ್ರಸ್ತನು," ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, "ಯೇಸು ಕರ್ತದೇವರು," ಎಂದು ಹೇಳಲಾರನು.
ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ. ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.
ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?
ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.
Fruto do Espírito
O fruto do Espírito é amor, alegria, paz, paciência, bondade, fidelidade, mansidão e domínio próprio.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,
ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.
ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.
ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.
Não entristeçais o Espírito
Não entristeçais o Espírito Santo de Deus. Não apaguem o Espírito — antes, enchei-vos dele continuamente.
ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,
ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.
ಕರ್ತದೇವರೇ ಆತ್ಮರಾಗಿದ್ದಾರೆ. "ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು."
ಕರ್ತದೇವರೇ ಆತ್ಮರಾಗಿದ್ದಾರೆ. "ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು."
O Espírito nos capacita
O Espírito intercede por nós, batiza e capacita para o serviço. Ele é poder para a missão e conforto na aflição.
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?
ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ. ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.
ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, "ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.
ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು, ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.
"ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು. ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ," ಎಂದರು.
ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ, ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ," ಎಂದರು.
ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು. ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, "ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ," ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
"ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ,
ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ,
ಕುರುಡರಿಗೆ ದೃಷ್ಟಿ ಕೊಡುವುದಕ್ಕೂ,
ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,
"ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ,
ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ,
ಕುರುಡರಿಗೆ ದೃಷ್ಟಿ ಕೊಡುವುದಕ್ಕೂ,
ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,
ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ."
ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!" ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.