Espírito
O espírito humano é a parte mais profunda do nosso ser — onde Deus habita, onde a fé se ancora e de onde brota a verdadeira adoração. A Bíblia nos chama a viver pelo Espírito.
A natureza do espírito
O espírito está pronto, mas a carne é fraca. A batalha entre carne e espírito é constante e exige vigilância.
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ" ಎಂದು ಹೇಳಿದನು.
"ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
ಆತ್ಮನ ಫಲವು ಮತ್ತು ದೇಹದ ದುಷ್ಫಲಗಳು
ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
O Espírito de Deus em nós
Vosso corpo é templo do Espírito Santo. Deus fortalece com poder no homem interior pelo seu Espírito.
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.
ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.
ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.
ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
Vida no Espírito
Deus é Espírito e importa que os que o adoram o adorem em espírito e em verdade. O Espírito vivifica e transforma.
ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ" ಎಂದನು.
ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ. ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ" ಎಂದನು.
ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.
ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
Promessas do Espírito
Derramarei o meu Espírito sobre toda a carne. O Espírito revela, guia e capacita os filhos de Deus.
ನನ್ನ ಗದರಿಕೆಗೆ ಲಕ್ಷ್ಯಕೊಡಿರಿ;
ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ,
ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ,
ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.
ಗರ್ವದಿಂದ ಭಂಗ,
ಉಬ್ಬಿನಿಂದ ದೊಬ್ಬು.
ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ,
ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ,
ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ,
ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, "ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ" ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.
ಚೀಯೋನಿಗೆ ರಕ್ಷಣೆಯ ವಾಗ್ದಾನಗಳು
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
"ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.
Cuidar do espírito
Cria em mim um coração puro e renova dentro de mim um espírito reto. O espírito quebrantado Deus não rejeita.
ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;
ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು;
ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ;
ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;
ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ,
ಅವರು ಸಹಾಯ ಮಾಡ ಶಕ್ತರಲ್ಲ,
ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ,
ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.
ಆತ್ಮಪ್ರೇರಿತ ನುಡಿಗಳು ಸತ್ಯವೋ ಅಸತ್ಯವೋ ಎಂದು ತಿಳಿದುಕೊಳ್ಳುವುದಕ್ಕಾಗಿ ಅವುಗಳನ್ನು ಪರೀಕ್ಷಿಸಿ ನೋಡಬೇಕು
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?" ಅಂದನು.
ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
ದೇವರು ವಿಶ್ವವನ್ನು ಸೃಷ್ಟಿಸಿದ್ದು
ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು,
ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.
ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು,
ಚಿನ್ನದ ಬಟ್ಟಲು ಜಜ್ಜಿಹೋಗುವುದು,
ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು,
ಬಾವಿಯ ರಾಟೆ ಮುರಿಯುವುದು,
ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು,
ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
ಆತನ ಮಹತ್ತುಗಳು ಎಷ್ಟೋ ಅತಿಶಯ!
ಆತನ ಅದ್ಭುತಗಳು ಎಷ್ಟೋ ವಿಶೇಷ!
ಆತನ ರಾಜ್ಯವು ಶಾಶ್ವತರಾಜ್ಯ,
ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು."