Espírito
O espírito humano é a parte mais profunda do nosso ser — onde Deus habita, onde a fé se ancora e de onde brota a verdadeira adoração. A Bíblia nos chama a viver pelo Espírito.
A natureza do espírito
O espírito está pronto, mas a carne é fraca. A batalha entre carne e espírito é constante e exige vigilância.
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ," ಎಂದು ಹೇಳಿದರು.
"ಆತ್ಮದಲ್ಲಿ ಬಡವರಾಗಿರುವವರು ಧನ್ಯರು,
ಪರಲೋಕ ರಾಜ್ಯವು ಅವರದು.
ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.
ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.
ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.
O Espírito de Deus em nós
Vosso corpo é templo do Espírito Santo. Deus fortalece com poder no homem interior pelo seu Espírito.
ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ. ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.
ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.
ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.
ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು. ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.
ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ. ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು
ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.
ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ.
ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.
ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.
ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.
ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.
ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.
Vida no Espírito
Deus é Espírito e importa que os que o adoram o adorem em espírito e em verdade. O Espírito vivifica e transforma.
ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು," ಎಂದರು.
ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ. ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು," ಎಂದರು.
ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.
ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.
ಕರ್ತದೇವರು ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.
Promessas do Espírito
Derramarei o meu Espírito sobre toda a carne. O Espírito revela, guia e capacita os filhos de Deus.
ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ!
ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ,
ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.
ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ,
ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.
ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ.
ಬೀಳುವಿಕೆಯ ಮುಂಚೆ ಜಂಬದ ಆತ್ಮ.
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ,
ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.
ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ,
ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ.
ಅದು ಅವನ ಅಂತರಂಗವನ್ನು ಶೋಧಿಸುತ್ತದೆ.
ಆಗ ಅವನು, "ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ.
ಏಕೆಂದರೆ ಯೆಹೋವ ದೇವರು
ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಮುರಿದ ಹೃದಯಗಳನ್ನು ಕಟ್ಟುವುದಕ್ಕೂ,
ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು
ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು
ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.
ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;
Cuidar do espírito
Cria em mim um coração puro e renova dentro de mim um espírito reto. O espírito quebrantado Deus não rejeita.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.
ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ;
ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.
ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ.
ಮುರಿದಂಥ, ಜಜ್ಜಿದಂಥ ಹೃದಯವನ್ನು
ದೇವರು ತಿರಸ್ಕರಿಸುವುದಿಲ್ಲ.
ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
ಅಧಿಪತಿಗಳಲ್ಲಿಯೂ ರಕ್ಷಿಸಲಾಗದ
ಮಾನವರಲ್ಲಿಯೂ ಭರವಸವಿಡಬೇಡಿರಿ.
ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ,
ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.
ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ, ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿರುತ್ತದೆ.
ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.
ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!" ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.
ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು. ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.
ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು;
ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.
ಬೆಳ್ಳಿಯಂತ ಸರ ಕಿತ್ತುಹೋಗುವುದು,
ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು.
ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು.
ಬಾವಿಯ ರಾಟೆ ಮುರಿಯುವುದು.
ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು.
ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.
ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.
ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು!
ಅವರ ಅದ್ಭುತಗಳು ಪರಾಕ್ರಮವಾದವುಗಳು!
ಅವರ ರಾಜ್ಯವು ನಿತ್ಯವಾದ ರಾಜ್ಯವು,
ಅವರ ಆಡಳಿತವು ತಲತಲಾಂತರಕ್ಕೂ ಇರುವುದು.