Estudar a Bíblia
Estudar a Bíblia é mergulhar na mente de Deus. A Palavra é lâmpada para os pés, espada do Espírito e alimento para a alma. O cristão que estuda cresce em sabedoria e maturidade.
A importância do estudo
Os bereanos eram mais nobres porque examinavam as Escrituras diariamente. Estudar a Bíblia é mandamento e privilégio.
ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.
ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ. ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.
ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.
Meditar e guardar
Não se aparte a lei do Senhor da tua boca. Medita nela de dia e de noite para que cumpras tudo o que nela está escrito.
ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.
ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ
ನನ್ನ ದಾರಿಗೆ ಬೆಳಕೂ ಆಗಿದೆ.
ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ!
ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.
ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು
ನನ್ನ ಶತ್ರುಗಳಿಗಿಂತ ಜ್ಞಾನಿಯಾಗಿ ಮಾಡಿವೆ.
ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ.
ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.
ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು?
ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.
ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ;
ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.
ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ
ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.
ಯೆಹೋವ ದೇವರೇ, ನಿಮಗೆ ಸ್ತುತಿಯುಂಟಾಗಲಿ;
ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.
ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ
ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ.
ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ
ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು.
ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ,
ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.
ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು,
ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.
ג ಗಿಮೆಲ್
ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ,
ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.
Estudo diligente
Esdras preparou o coração para buscar e ensinar a lei. O estudo exige disciplina, constância e coração aberto.
ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು. ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.
ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.
ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು. ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು. ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.
ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ;
ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;
ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು
ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;
ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ
ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.
ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ;
ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.
ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು
ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.
ಜ್ಞಾನದಿಂದ ಇನ್ನಷ್ಟು ಲಾಭಗಳು
ಮಗನೇ, ನನ್ನ ಉಪದೇಶವನ್ನು ಮರೆಯಬೇಡ;
ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು,
ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ;
ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.
ಆಜ್ಞೆಯೇ ದೀಪವಾಗಿದೆ,
ಬೋಧನೆಯೇ ಬೆಳಕಾಗಿದೆ;
ಶಿಕ್ಷಣದ ತಿದ್ದುವಿಕೆಗಳು
ಜೀವ ಮಾರ್ಗವಾಗಿವೆ.
Proteção e crescimento
Quem ignora a Palavra perece. Toda Escritura é útil — crescei na graça e no conhecimento do nosso Senhor.
ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ.
"ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ.
ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ.
ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ,
ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.
ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.
ಅದಕ್ಕೆ ಯೇಸು, "ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?
ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ. ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ.
ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.