Fim do mundo
A Bíblia fala sobre o fim do mundo como evento certo e definitivo. Céus e terra passarão, mas as palavras de Jesus jamais passarão. A questão não é se, mas quando.
Os céus passarão
Os céus e a terra passarão, mas as palavras de Jesus permanecerão para sempre. O mundo presente é temporário.
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
"ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ,
" ‘ಸೂರ್ಯನು ಕತ್ತಲಾಗುವನು;
ಚಂದ್ರನು ಕಾಂತಿಹೀನನಾಗುವನು.
ಆಕಾಶದಿಂದ ನಕ್ಷತ್ರಗಳು ಬೀಳುವವು;
ಮತ್ತು ಆಕಾಶದ ಶಕ್ತಿಗಳು ಕದಲುವವು.’
ತಿಳಿಯದ ದಿನ ಹಾಗೂ ಗಳಿಗೆ
"ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.
ಆ ದಿನವು ಮತ್ತು ಆ ಗಳಿಗೆಯು ಯಾರಿಗೂ ತಿಳಿಯದು
"ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.
O dia do Senhor
O dia do Senhor virá como ladrão. Os céus passarão com grande estrondo, e os elementos se dissolverão no fogo.
ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
ಕರ್ತ ಯೇಸುವಿನ ದಿನವು
ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ. ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ. ಆದರೆ, "ಸಮಾಧಾನ, ಸುರಕ್ಷಿತ," ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ. ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.
Destruição e renovação
O Dia do Senhor trará juízo sobre os ímpios, mas também novos céus e nova terra onde habita a justiça.
ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ,
ಬಹು ತ್ವರೆಯಾಗಿ ಬರುತ್ತಿದೆ.
ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು.
ಶೂರನು ಅಲ್ಲಿ ಬೊಬ್ಬೆ ಹಾಕುವನು.
ಆ ದಿವಸವು ರೌದ್ರದ ದಿವಸವು,
ಇಕ್ಕಟ್ಟು ಸಂಕಟಗಳ ದಿವಸವು,
ಹಾಳುಪಾಳುಗಳ ದಿವಸವು,
ಕತ್ತಲೆ ಮಬ್ಬುಗಳ ದಿವಸವು,
ಕಾರ್ಮುಗಿಲ ಕಗ್ಗತ್ತಲ ದಿವಸವು,
ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ
ಉನ್ನತವಾದ ಗೋಪುರಗಳಿಗೆ
ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.
"ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು.
ಅವರು ಕುರುಡರ ಹಾಗೆ ತಡಕುವರು.
ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ.
ಅವರ ರಕ್ತವು ಧೂಳಿನಂತೆಯೂ
ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.
ಯೆಹೋವ ದೇವರ ರೌದ್ರದಿನದಂದು
ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ
ಅವರನ್ನು ರಕ್ಷಿಸಲಾರವು."
ಅವರ ಅಸೂಯೆಯ ಬೆಂಕಿಯು
ದೇಶವನ್ನೆಲ್ಲಾ ನುಂಗುವುದು.
ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ
ಬೇಗ ನಿರ್ಮೂಲ ಮಾಡಿಬಿಡುವರು.
ಇಗೋ, ಯೆಹೋವ ದೇವರ ದಿನವು ಬರುತ್ತದೆ.
ಅದು ಭೂಮಿಯನ್ನು ಹಾಳು ಮಾಡುವುದಕ್ಕೂ,
ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ,
ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.
ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು.
ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.
"ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು. ಆಕಾಶದ ಶಕ್ತಿಗಳು ಕದಲುವುದರಿಂದ ಲೋಕಕ್ಕೆ ಏನು ಸಂಭವಿಸುವುದೋ ಎಂಬ ಭಯಭೀತಿಯಿಂದ, ಮಾನವರು ಮನಗುಂದಿಹೋಗುವರು.
ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ," ಎಂದರು.
ನೂತನ ಆಕಾಶ ಮತ್ತು ನೂತನ ಭೂಮಿ
ತರುವಾಯ, "ನೂತನ ಆಕಾಶವನ್ನೂ ನೂತನ ಭೂಮಿಯನ್ನೂ" ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.
ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, "ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!" ಎಂದರು ಮತ್ತು ನನಗೆ, "ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!" ಎಂದು ಹೇಳಿದನು.