Sinais do fim dos tempos
A Bíblia descreve sinais que precederão a volta de Jesus. Guerras, falsos mestres, sinais cósmicos e a pregação do evangelho a todas as nações — tudo aponta para o fim dos tempos.
Sinais proféticos
Este evangelho do Reino será pregado em todo o mundo e então virá o fim. Os sinais dos últimos tempos já se manifestam.
ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
"ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
"ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ" ಎಂದು ಹೇಳಿದನು.
ಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದು
"ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
Os últimos dias
Nos últimos dias virão tempos difíceis, homens amantes de si mesmos. Mas derramarei o meu Espírito sobre toda a carne.
ಅಂತ್ಯ ದಿನಗಳು
ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ. ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ, ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
"ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು,
ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು;
ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ
ನನ್ನ ಆತ್ಮವನ್ನು ಸುರಿಸುವೆನು,
ಅವರೂ ಪ್ರವಾದಿಸುವರು.
ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ
ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ
ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು.
ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು.
ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ" ಎಂಬುದೇ.
ಯೆಹೋವನ ದಿನ
ತರುವಾಯ ನಾನು
ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು.
ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು.
ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ
ನನ್ನ ಆತ್ಮವನ್ನು ಸುರಿಸುವೆನು.
ಯುಗದ ಸಮಾಪ್ತಿ
"ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
Esperança e prontidão
O dia do Senhor virá como ladrão. Mas nós não somos das trevas — estejamos sóbrios, vigiliando e esperando.
ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು. ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
"ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ" ಅಂದನು.
ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ
ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
ನೂತನ ಸೃಷ್ಟಿ
"ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು;
ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ;
ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ,
ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು.
ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
ಯೆಹೋವನ ನ್ಯಾಯತೀರ್ಪಿನ ದಿನ
"ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು. ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ನೂತನ ಭೂಮ್ಯಾಕಾಶಗಳು
ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.