Sinais do fim dos tempos
A Bíblia descreve sinais que precederão a volta de Jesus. Guerras, falsos mestres, sinais cósmicos e a pregação do evangelho a todas as nações — tudo aponta para o fim dos tempos.
Sinais proféticos
Este evangelho do Reino será pregado em todo o mundo e então virá o fim. Os sinais dos últimos tempos já se manifestam.
ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.
"ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ,
" ‘ಸೂರ್ಯನು ಕತ್ತಲಾಗುವನು;
ಚಂದ್ರನು ಕಾಂತಿಹೀನನಾಗುವನು.
ಆಕಾಶದಿಂದ ನಕ್ಷತ್ರಗಳು ಬೀಳುವವು;
ಮತ್ತು ಆಕಾಶದ ಶಕ್ತಿಗಳು ಕದಲುವವು.’
"ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು. ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
"ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.
ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ," ಎಂದರು.
"ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.
Os últimos dias
Nos últimos dias virão tempos difíceis, homens amantes de si mesmos. Mas derramarei o meu Espírito sobre toda a carne.
ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.
"ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ
ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು,
ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು,
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,
ನನ್ನ ಆತ್ಮವನ್ನು ಸುರಿಸುವೆನು,
ಅವರು ಪ್ರವಾದಿಸುವರು.
ನಾನು ಆಕಾಶದಲ್ಲಿ ಅದ್ಭುತಗಳನ್ನು,
ಭೂಮಿಯಲ್ಲಿ ಸೂಚಕಕಾರ್ಯಗಳನ್ನು,
ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು
ಸೂರ್ಯನು ಕತ್ತಲಾಗುವನು,
ಚಂದ್ರನು ರಕ್ತವಾಗುವನು.
ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ
ರಕ್ಷಣೆ ಆಗುವುದು.’
"ಆಮೇಲೆ ನಾನು,
ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ನಿಮ್ಮ ಯುವಜನರಿಗೆ ದರ್ಶನಗಳಾಗುವವು.
ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,
ನನ್ನ ಆತ್ಮವನ್ನು ಸುರಿಸುವೆನು.
"ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು. ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.
Esperança e prontidão
O dia do Senhor virá como ladrão. Mas nós não somos das trevas — estejamos sóbrios, vigiliando e esperando.
ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ. ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು. ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ. ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.
"ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಬರುವುದು. ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ," ಎಂದರು.
ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು. ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.
"ನಾನು ಹೊಸ ಆಕಾಶವನ್ನೂ,
ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ.
ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ
ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ.
ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ,
ಎಂದೆಂದಿಗೂ ಉಲ್ಲಾಸಪಡಿರಿ.
ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ,
ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ.
ಯೆರೂಸಲೇಮಿನಲ್ಲಿ ಉಲ್ಲಾಸಿಸಿ,
ನನ್ನ ಜನರಲ್ಲಿ ಸಂತೋಷ ಪಡುವೆನು.
ಅದರಲ್ಲಿ ಅಳುವ ಧ್ವನಿಯೂ,
ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ.
"ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು," ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.
ತರುವಾಯ, "ನೂತನ ಆಕಾಶವನ್ನೂ ನೂತನ ಭೂಮಿಯನ್ನೂ" ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.