Publicidade

Graça

Por Bíblia Online

A graça de Deus é favor imerecido. Pela graça somos salvos, pela graça vivemos, pela graça somos sustentados. É o dom mais precioso de Deus — dado a quem não merece.

Salvos pela graça

Pela graça sois salvos, mediante a fé, e isto não vem de vós — é dom de Deus. Não por obras, para que ninguém se glorie.

ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ. ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.

ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು. ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.

ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ. ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.

ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?

ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.

Graça que capacita

A graça me basta, pois o poder se aperfeiçoa na fraqueza. Na graça, não estamos mais sob a lei, mas sob o favor de Deus.

ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!

ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.

ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.

ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.

ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.

A graça de Deus

O Senhor é compassivo e gracioso, tardio em irar-se e grande em amor. Sua graça é nova a cada manhã.

ಯೆಹೋವ ದೇವರು, ಅನುಕಂಪವೂ ದಯೆಯೂ

ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.

ನಿಶ್ಚಯವಾಗಿ ಶುಭವೂ ಪ್ರೀತಿಯೂ

ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ;

ನಾನು ಯೆಹೋವ ದೇವರ ಮನೆಯಲ್ಲಿ

ಸದಾಕಾಲವೂ ವಾಸಿಸುವೆನು.

ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ.

ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ.

ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.

ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.

ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ.

ನನ್ನ ಕೂಗಿಗೆ ಕರುಣೆ ತೋರಿಸಿ,

ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.

" ‘ "ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ,

ನಿಮ್ಮನ್ನು ಕಾಪಾಡಲಿ.

ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ,

ನಿಮಗೆ ಕೃಪೆ ತೋರಿಸಲಿ.

ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ,

ನಿಮಗೆ ಸಮಾಧಾನ ಅನುಗ್ರಹಿಸಲಿ." ’

ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು.

ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು.

ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ.

ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

Viver pela graça

A graça de nosso Senhor Jesus Cristo esteja convosco. Perdoando e confessando, experimentamos a graça restauradora.

ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!

ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.

ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.

ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.

ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.

ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.

ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.

ಹಿಜ್ಕೀಯನು ಪಸ್ಕಹಬ್ಬವನ್ನು ಆಚರಿಸಿದ್ದು

ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು. ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು. ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು. ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು. ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.

ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ,

"ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು. ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು. ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ," ಎಂದು ಹೇಳಿದರು.

ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.

ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು. ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, "ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ, ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ," ಎಂದು ವಿಜ್ಞಾಪನೆ ಮಾಡಿದನು. ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.

ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.

ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.

ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು. ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು. ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ. ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.

Publicidade
Bíblia Online Bíblia Online

Bíblia Online • Versão: 2026-06-22_10-02-25-