Irmãos de Jesus
Os irmãos de Jesus são mencionados nos Evangelhos. Embora inicialmente céticos sobre sua missão, alguns, como Tiago, tornaram-se líderes da igreja primitiva.
Menções nos Evangelhos
Jesus teve irmãos chamados Tiago, José, Simão e Judas. Eles conviveram com Ele na casa de Nazaré e participaram de sua vida pública.
ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ? ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?" ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು
ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
ಯೇಸುವಿನ ತಾಯಿ ಹಾಗೂ ಸಹೋದರರು
ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು. ಆ ಜನರು ಆತನಿಗೆ, "ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು" ಎಂದು ಹೇಳಿದರು. ಅದಕ್ಕೆ ಆತನು ಅವರಿಗೆ, "ನನಗೆ ತಾಯಿಯೂ, ತಮ್ಮಂದಿರೂ ಯಾರು?" ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ, "ಇಗೋ, ನನ್ನ ತಾಯಿ, ನನ್ನ ತಮ್ಮಂದಿರು. ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ" ಅಂದನು.
ಯೇಸುವಿನ ತಾಯಿ ಮತ್ತು ಸಹೋದರರು
ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
Da incredulidade à fé
Os irmãos de Jesus não criam nele inicialmente. Mas após a ressurreição, estavam entre os discípulos em oração.
ಆದುದರಿಂದ ಆತನ ಸಹೋದರರು ಆತನಿಗೆ "ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು. ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ" ಎಂದು ಹೇಳಿದರು. ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.
ಯೇಸು ಆಕೆಗೆ, "ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು" ಎಂದನು.
ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು. ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.