Irrepreensível
Ser irrepreensível não é ser perfeito — é viver com integridade diante de Deus e dos homens. A Bíblia nos chama a buscar uma vida reta, pura e sem manchas visíveis de hipocrisia.
O padrão divino
Deus é perfeito e chama seus filhos à integridade. A palavra de Deus é purificada e Ele é escudo dos que caminham na retidão.
ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು;
ಯೆಹೋವನ ವಚನವು ಶುದ್ಧವಾದದ್ದು.
ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
ಧರ್ಮಶಾಸ್ತ್ರದ ಅನುಕರಣೆ
ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ,
ಸದಾಚಾರಿಗಳಾಗಿ ನಡೆಯುವವರು ಧನ್ಯರು.
ಅವನು ಸಜ್ಜನನೂ, ನೀತಿವಂತನೂ,
ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
ಅವನು ಚಾಡಿಯನ್ನು ಹೇಳದವನೂ,
ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,
ಯಾರನ್ನೂ ನಿಂದಿಸದವನೂ ಆಗಿರಬೇಕು.
ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು.
ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
Buscar a perfeição em Cristo
Todos tropeçamos em muitas coisas, mas o alvo é a maturidade. Cristo é a fonte da salvação eterna para todos os que lhe obedecem.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
ಯೇಸು ಅವನಿಗೆ, "ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು" ಎಂದು ಹೇಳಿದನು.
Vida íntegra
Que a vossa alegria seja completa! Vivam em harmonia, sejam irrepreensíveis — transformados pela renovação da mente.
ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಕೊರಿಂಥ ಸಭೆಯಲ್ಲಿ ಉಂಟಾದ ಬೇಧಗಳು (1:10, 4:20)
ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಯೇಸುವಿನ ದೀನತೆಯನ್ನು ಅನುಸರಿಸಬೇಕು
ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ, ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
ಆತನು ದೇವಸ್ವರೂಪನಾಗಿದ್ದರೂ,
ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ
ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
ತನ್ನನ್ನು ಬರಿದು ಮಾಡಿಕೊಂಡು
ದಾಸನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದನು.
ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ
ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ,
ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,
ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು
ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ನಕ್ಷತ್ರಗಳಂತೆ ಪ್ರಕಾಶಿಸುವುದು
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ. ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ.
ಎಪಫ್ರೊದೀತನ್ನೂ ತಿಮೊಥೆಯನ್ನೂ
ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು. ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು. ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ. ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
ಆತನಾದರೋ ನನ್ನ ದಾರಿಯನ್ನು ಬಲ್ಲನು,
ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ,
ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.