Jesus Cristo
Jesus Cristo é o centro de toda a Escritura — Deus encarnado, Salvador do mundo, Senhor dos senhores. Nele habita corporalmente toda a plenitude da divindade.
A divindade de Cristo
No princípio era o Verbo, e o Verbo estava com Deus, e o Verbo era Deus. Jesus é Deus revelado em carne humana.
ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು. ಆ ವಾಕ್ಯವೆಂಬುವವರು ಆದಿಯಲ್ಲಿ ದೇವರ ಬಳಿಯಲ್ಲಿದ್ದರು. ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.
ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ. ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
ಅವರು ದೇವರ ಸ್ವರೂಪವಾಗಿದ್ದರೂ,
ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
ತಮ್ಮನ್ನು ತಾವೇ ಬರಿದುಮಾಡಿಕೊಂಡು
ಗುಲಾಮನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದರು.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
Jesus, o Filho de Deus
Tu és o Cristo, o Filho do Deus vivo! Jesus revelou o Pai e demonstrou sua autoridade divina por palavras e obras.
ಯೇಸು ಅವರಿಗೆ, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಕೇಳಿದರು.
ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, "ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ," ಎಂದು ಉತ್ತರಕೊಟ್ಟನು.
ಯೇಸು ಅವನಿಗೆ, "ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.
"ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು." ಈ ಹೆಸರಿನ ಅರ್ಥ, "ದೇವರು ನಮ್ಮ ಸಂಗಡ ಇದ್ದಾರೆ," ಎಂಬುದು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, "ನಿಜವಾಗಿಯೂ ಈತನು ದೇವಪುತ್ರನಾಗಿದ್ದನು," ಎಂದರು.
ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು.
ತಿರುಗಿ ಮಹಾಯಾಜಕನು, "ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?" ಎಂದು ಯೇಸುವನ್ನು ಕೇಳಿದನು.
ಅದಕ್ಕೆ ಯೇಸು, "ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ," ಎಂದರು.
ಅವನು ಅವರಿಗೆ, "ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು. ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, "ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ," ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
Eu Sou
Jesus disse: antes que Abraão existisse, Eu Sou. Ele se identificou com o nome divino revelado a Moisés na sarça ardente.
ಯೇಸು ಅವರಿಗೆ, "ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ," ಎಂದರು.
ಅದಕ್ಕೆ ಮೋಶೆಯು ದೇವರಿಗೆ, "ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?" ಎಂದನು.
ಆಗ ದೇವರು ಮೋಶೆಗೆ, "ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು," ಎಂದರು.
ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ," ಎಂದು ಉತ್ತರಕೊಟ್ಟರು.
ಯೇಸು ಅವರಿಗೆ, "ನನ್ನ ತಂದೆ ಯಾವಾಗಲೂ ಕೆಲಸ ಮಾಡುತ್ತಾರೆ. ನಾನೂ ಕೆಲಸ ಮಾಡುತ್ತೇನೆ," ಎಂದರು. ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.
ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.
ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ. ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ. ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.
O Salvador e Senhor
Jesus é o caminho, a verdade e a vida. Não há outro nome dado entre os homens pelo qual devamos ser salvos.
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
ಯೇಸು ಅವನಿಗೆ, "ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ? ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾರೆ ಎಂದು ನೀನು ನಂಬುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವುದಿಲ್ಲ; ನನ್ನಲ್ಲಿರುವ ತಂದೆಯೇ ತಮ್ಮ ಕ್ರಿಯೆಗಳನ್ನು ಮಾಡುತ್ತಾರೆ.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.
ಯೇಸು ಆಕೆಗೆ, "ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?" ಎಂದರು.
ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ," ಎಂದನು.
ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, "ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?" ಎಂದನು.
"ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು," ಎಂದು ಫಿಲಿಪ್ಪನು ಹೇಳಿದನು.
"ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ," ಎಂದು ಕಂಚುಕಿಯು ಪ್ರಕಟಿಸಿದನು. ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
A supremacia de Cristo
Ele é o resplendor da glória de Deus e a expressão exata do seu ser. Toda a plenitude habita nele e por Ele tudo subsiste.
ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ. ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.
ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ. ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.
ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.
ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;
ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು.
ಆದರೂ ನಾವು ಆತನನ್ನು ಪೆಟ್ಟು ತಿಂದವನು,
ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.
ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು.
ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು.
ಆತನ ಗಾಯಗಳಿಂದ ನಮಗೆ ಗುಣವಾಯಿತು.
ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ಆ ಮಗನನ್ನು ನಮಗಾಗಿ ಕೊಡಲಾಗಿದೆ.
ಆಡಳಿತವು ಅವರ ಬಾಹುವಿನ ಮೇಲಿರುವುದು,
ಅದ್ಭುತವಾದವರು ಸಮಾಲೋಚಕರು,
ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ,
ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
Confessar a Cristo
Todo aquele que confessa que Jesus é o Filho de Deus, Deus permanece nele e ele em Deus. A fé em Cristo é a vitória.
ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.
ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.
ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು. ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.
ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.
ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.
ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ. ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.
ನೀನು, "ಯೇಸುವೇ ಕರ್ತ," ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
Viver em Cristo
Já não sou eu quem vive, mas Cristo vive em mim. Ele supre toda necessidade, dá paz e reina como Senhor.
ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.
ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.
ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.
ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ, ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.
ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ "ಕರ್ತದೇವರು" ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.
ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.
O Rei eterno
O Rei dos reis voltará em glória e majestade. Todo joelho se dobrará e toda língua confessará que Jesus Cristo é o Senhor.
ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ. ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದಾನೆ. ಆತನ ಹೆಸರು ದೇವರ ವಾಕ್ಯವೆಂಬುದೇ. ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು. ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. "ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು." ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲಣ ವಸ್ತ್ರದಲ್ಲಿ:
ರಾಜಾಧಿರಾಜನೂ ಕರ್ತರ ಕರ್ತನೂ.
ಎಂಬ ಹೆಸರು ಬರೆದಿದೆ.
ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!
ಆಮೇಲೆ ಯೇಸು ತೋಮನಿಗೆ, "ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು," ಎಂದರು.
ಆಗ ತೋಮನು, "ನನ್ನ ಕರ್ತ, ನನ್ನ ದೇವರೇ!" ಎಂದನು.
ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ಶಿಷ್ಯರ ಮುಂದೆ ಮಾಡಿದರು. ಅವುಗಳು ಈ ಪುಸ್ತಕದಲ್ಲಿ ಬರೆದಿಲ್ಲ. ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ."
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು. ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ," ಎಂದು ಉತ್ತರಕೊಟ್ಟರು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು. ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು. ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.
ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ," ಎಂದರು.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, "ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ," ಎಂದರು.
ಅದಕ್ಕೆ ಯೇಸು, "ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ," ಎಂದು ಹೇಳಿದರು.
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.