Jovens
Deus tem planos maravilhosos para os jovens. A Bíblia os convida a consagrar a juventude ao Senhor, crescer em sabedoria e ser exemplo para todos em fé, palavra, conduta e amor.
Ninguém despreze a tua mocidade
Paulo exortou Timóteo: sê exemplo dos fiéis na palavra, no procedimento, no amor, no espírito, na fé e na pureza.
ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
Lembrar do Criador na juventude
Lembra-te do teu Criador nos dias da tua mocidade. A sabedoria ganha cedo produz frutos duradouros na vida inteira.
ಕಷ್ಟದ ದಿನಗಳು ಬರುವುದಕ್ಕೆ ಮೊದಲು,
"ಇವುಗಳಲ್ಲಿ ನನಗೆ ಸಂತೋಷವಿಲ್ಲ" ಎಂದು,
ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ,
ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
ಕಷ್ಟದ ದಿನಗಳು ಬರುವುದಕ್ಕೆ ಮೊದಲು,
"ಇವುಗಳಲ್ಲಿ ನನಗೆ ಸಂತೋಷವಿಲ್ಲ" ಎಂದು,
ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ,
ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ,
ಮಳೆಯ ಮೋಡಗಳು ಹಿಂತಿರುಗಿ ಬರುವವು.
ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು,
ಬಲಿಷ್ಠರು ಬಗ್ಗುವರು,
ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು,
ಕಿಟಕಿಗಳಿಂದ ನೋಡುವವರು ಮಂಕಾಗುವರು.
ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು,
ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ.
ಮನಸ್ಸಿಗೆ ತಕ್ಕಂತೆಯೂ,
ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ.
ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
ನಿನ್ನ ಹೃದಯದಿಂದ ದುಃಖವನ್ನೂ,
ದೇಹದಿಂದ ಶ್ರಮೆಯನ್ನೂ ತೊಲಗಿಸು,
ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
ರಾಜಕೀಯ ಶಕ್ತಿಯು ವ್ಯರ್ಥ
ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.
Força e promessa
Os jovens renovam suas forças quando esperam no Senhor. Deus levanta jovens com visões e sonhos para transformar o mundo.
ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಯೆಹೋವನ ದಿನ
ತರುವಾಯ ನಾನು
ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು.
ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು.
ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ
ನನ್ನ ಆತ್ಮವನ್ನು ಸುರಿಸುವೆನು.
ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು. ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
ಯುವಕರಿಗೆ ಬಲವು ಭೂಷಣ,
ಮುದುಕರಿಗೆ ನರೆಯು ಒಡವೆ.
ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ,
ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
Guardar o caminho
Como purificará o jovem seu caminho? Guardando-o segundo a tua Palavra. A Escritura na juventude guarda do pecado a vida inteira.
ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ನಿನಗೆ ವಿರುದ್ಧವಾಗಿ ಪಾಪಮಾಡದಂತೆ,
ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
ಕರ್ತನಾದ ಯೆಹೋವನೇ,
ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
ಯೆಹೋವನನ್ನು ಕೊಂಡಾಡಲಿ.
ಆತನ ನಾಮವೊಂದೇ ಮಹತ್ವವುಳ್ಳದ್ದು,
ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
ಪೀಠಿಕೆ: ಜ್ಞಾನೋಕ್ತಿಗಳ ಉದ್ದೇಶ
ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.
ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು,
ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ,
ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.
ಈ ನುಡಿಗಳು ಮೂಢರಿಗೆ ಜಾಣತನವನ್ನೂ,
ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
ಕಂದಾ, ಕೇಳು, ಜ್ಞಾನವಂತನಾಗಿರು,
ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
ಕುಡುಕರಲ್ಲಿಯೂ,
ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.
ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು,
ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
ಹೆತ್ತ ತಂದೆಯ ಮಾತಿಗೆ ಕಿವಿಗೊಡು,
ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
Coragem e vocação
Deus chamou jovens como Jeremias e Josué para grandes missões. A juventude não é desculpa — é oportunidade de servir poderosamente.
ಅದಕ್ಕೆ ನಾನು, "ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು" ಎಂದು ಅರಿಕೆ ಮಾಡಿದೆನು.
ಆಗ ಯೆಹೋವನು ನನಗೆ, "ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು" ಎಂದು ಹೇಳಿದನು.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ" ಎಂಬುದೇ.
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ. ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ. ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ "ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ." ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.