O juízo final
O juízo final é a conclusão da história humana. Todos os seres humanos comparecerão diante do trono de Deus para o julgamento eterno — os salvos para a vida, os ímpios para a condenação.
O grande trono branco
Vi um grande trono branco e os mortos diante de Deus. Os livros foram abertos e cada um foi julgado segundo as suas obras.
ಕಡೇ ನ್ಯಾಯತೀರ್ಪನ್ನು ಕುರಿತದ್ದು
ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
"ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
"ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ. ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.
"ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
"ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
Preparação para o juízo
Deus estabeleceu um dia para julgar o mundo com justiça. Arrependei-vos, porque o juízo se aproxima e cada palavra será pesada.
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ" ಅಂದನು.
ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ" ಅಂದನು.
"ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
"ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು" ಎಂದು ಹೇಳಿದನು.
ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ,
ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ,
ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
ಆಗ ನಾನು ಮನಸ್ಸಿನಲ್ಲಿ, "ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು" ಎಂದು ಅಂದುಕೊಂಡೆನು.
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
"ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ? ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ" ಇದು ಕರ್ತನಾದ ಯೆಹೋವನ ನುಡಿ.
Segurança em Cristo
Quem crê no Filho tem a vida eterna e não entra em juízo. O amor de Deus é nosso refúgio diante do juízo vindouro.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ, ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
"ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ
ಬರುವನು ತಡಮಾಡುವುದಿಲ್ಲ.
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು,
ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ."
ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
ಆತನು ಬರುತ್ತಾನೆ;
ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ.
ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,
ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
Este artigo te tocou? Faça uma oração!
+581 estão orando agora.
Junte-se à corrente de oração.