O juízo final
O juízo final é a conclusão da história humana. Todos os seres humanos comparecerão diante do trono de Deus para o julgamento eterno — os salvos para a vida, os ímpios para a condenação.
O grande trono branco
Vi um grande trono branco e os mortos diante de Deus. Os livros foram abertos e cada um foi julgado segundo as suas obras.
ಸತ್ತವರ ಪುನರುತ್ಥಾನ ಮತ್ತು ನ್ಯಾಯತೀರ್ಪು
ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು. ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.
ಆಮಂತ್ರಣ ಮತ್ತು ಎಚ್ಚರಿಕೆ
ಆಗ ಕರ್ತ ಯೇಸು, "ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.
ಆಮಂತ್ರಣ ಮತ್ತು ಎಚ್ಚರಿಕೆ
ಆಗ ಕರ್ತ ಯೇಸು, "ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ. ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.
"ನಾನು ನೋಡುತ್ತಿದ್ದ ಹಾಗೆಯೇ,
"ಸಿಂಹಾಸನಗಳನ್ನು ಜೋಡಿಸಿದರು.
ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು.
ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ,
ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ,
ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ,
ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
"ನಾನು ನೋಡುತ್ತಿದ್ದ ಹಾಗೆಯೇ,
"ಸಿಂಹಾಸನಗಳನ್ನು ಜೋಡಿಸಿದರು.
ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು.
ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ,
ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ,
ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ,
ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು,
ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು.
ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು.
ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.
ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.
Preparação para o juízo
Deus estabeleceu um dia para julgar o mundo com justiça. Arrependei-vos, porque o juízo se aproxima e cada palavra será pesada.
ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ."
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು," ಎಂದು ಹೇಳಿದರು.
ಕುರಿ ಆಡುಗಳ ಸಾಮ್ಯ
"ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು. ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು. ನಾನು ಕುರಿಗಳನ್ನು ನನ್ನ ಬಲಗಡೆಯಲ್ಲಿಯೂ ಆಡುಗಳನ್ನು ಎಡಗಡೆಯಲ್ಲಿಯೂ ನಿಲ್ಲಿಸುವೆನು.
ಕುರಿ ಆಡುಗಳ ಸಾಮ್ಯ
"ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು. ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು. ನಾನು ಕುರಿಗಳನ್ನು ನನ್ನ ಬಲಗಡೆಯಲ್ಲಿಯೂ ಆಡುಗಳನ್ನು ಎಡಗಡೆಯಲ್ಲಿಯೂ ನಿಲ್ಲಿಸುವೆನು.
"ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ. ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.
"ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು? ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು.
"ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.
"ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.
"ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.
"ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.
"ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು," ಎಂದು ಹೇಳುವೆನು.
ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ,
ದೇವರು ಆ ಎಲ್ಲಾ ಕಾರ್ಯಗಳನ್ನೂ
ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.
ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು,
"ನೀತಿವಂತರನ್ನೂ ದುಷ್ಟರನ್ನೂ
ದೇವರು ನ್ಯಾಯತೀರಿಸುವನು.
ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ,
ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ."
"ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ. ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ? ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.
Segurança em Cristo
Quem crê no Filho tem a vida eterna e não entra em juízo. O amor de Deus é nosso refúgio diante do juízo vindouro.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು. ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು. ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು. ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು. ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.
ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ.
ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ. ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ. ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.
ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.
ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ. ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.
ಏಕೆಂದರೆ,
"ಇನ್ನು ಸ್ವಲ್ಪ ಸಮಯದಲ್ಲಿಯೇ,
ಬರಲಿರುವ ಒಬ್ಬರು ಬಂದೇ ಬರುವರು.
ಅವರು ತಡಮಾಡುವುದಿಲ್ಲ."
ಆದರೆ,
"ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು,
ಅವನು ಹಿಂಜರಿದರೆ,
ಅವನಲ್ಲಿ ನನಗೆ ಸಂತೋಷವಿರುವುದಿಲ್ಲ."
ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.
ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ. ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.
ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ,
ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ;
ಜನರಿಗೆ ತಮ್ಮ ಸತ್ಯದಿಂದಲೂ
ನ್ಯಾಯತೀರಿಸಲು ಬರುತ್ತಾರೆ.
Este artigo te tocou? Faça uma oração!
+581 estão orando agora.
Junte-se à corrente de oração.