Legalidades
A Bíblia reconhece a necessidade de leis e governo civil. Os cristãos são chamados a obedecer às autoridades estabelecidas por Deus, enquanto mantêm a lealdade suprema a Cristo.
Submissão às autoridades
Toda autoridade é instituída por Deus. O cristão é chamado a respeitar as leis, pagar tributos e honrar quem governa.
ಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆ
ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.
ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು" ಅಂದರು. ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, "ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ" ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. ಆತನು, "ಈ ಸ್ವರೂಪವು ಈ ಮುದ್ರೆಯೂ ಯಾರದು?" ಎಂದು ಕೇಳಿದ್ದಕ್ಕೆ ಅವರು, "ಕೈಸರನದು" ಅಂದರು. ಆಗ ಆತನು ಅವರಿಗೆ, "ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ" ಎಂದು ಹೇಳಿದನು.
Obrigações legais
Jesus cumpriu obrigações legais, pagou impostos e orientou seus seguidores a obedecer à lei sem comprometer a fé.
ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು
ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, "ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ" ಎಂದು ಕೇಳಲು, "ಹೌದು ಕಟ್ಟುವನು" ಅಂದನು. ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, "ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದನು. ಅವನು, "ಪರರಿಂದ" ಎಂದು ಉತ್ತರ ಕೊಡಲು, ಯೇಸು ಅವನಿಗೆ, "ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು" ಎಂದು ಹೇಳಿದನು.
"ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ. ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
ಯೇಸು ಕ್ರಿಸ್ತನ ಜನನವೂ
ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
Perspectiva divina
As nações são como uma gota no balde diante de Deus. Ele abre portas que nenhuma lei pode fechar.
ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ.
ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.
ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.
ಪಿಲಾತನು, "ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?" ಎಂದು ಆತನನ್ನು ಕೇಳಿದನು. ಅದಕ್ಕೆ ಯೇಸು, "ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ" ಎಂದು ಉತ್ತರ ಕೊಟ್ಟನು.
Este artigo te tocou? Faça uma oração!
+581 estão orando agora.
Junte-se à corrente de oração.