Legalidades
A Bíblia reconhece a necessidade de leis e governo civil. Os cristãos são chamados a obedecer às autoridades estabelecidas por Deus, enquanto mantêm a lealdade suprema a Cristo.
Submissão às autoridades
Toda autoridade é instituída por Deus. O cristão é chamado a respeitar as leis, pagar tributos e honrar quem governa.
ಅಧಿಕಾರಿಗಳಿಗೆ ಅಧೀನನಾಗಿರುವುದು
ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ. ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು. ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು. ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.
ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ. ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.
ಪ್ರೀತಿಯು ಮೋಶೆಯ ನಿಯಮವನ್ನು ನೆರವೇರಿಸುವುದು
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.
ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು, ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ.
ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು," ಎಂದರು.
ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, "ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ," ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು. ಯೇಸು ಅವರಿಗೆ, "ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?" ಎಂದು ಕೇಳಿದರು.
ಅದಕ್ಕೆ ಅವರು, "ಕೈಸರನದು," ಎಂದರು.
ಆಗ ಯೇಸು, "ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ," ಎಂದರು.
Obrigações legais
Jesus cumpriu obrigações legais, pagou impostos e orientou seus seguidores a obedecer à lei sem comprometer a fé.
ಯೇಸು ದೇವಾಲಯದ ತೆರಿಗೆ ಕೊಟ್ಟದ್ದು
ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, "ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?" ಎಂದು ಕೇಳಿದರು.
ಅದಕ್ಕೆ ಪೇತ್ರನು, "ಹೌದು, ಕಟ್ಟುತ್ತಾರೆ," ಎಂದನು.
ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, "ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?" ಎಂದು ಕೇಳಿದರು.
"ಪರರಿಂದ," ಎಂದು ಪೇತ್ರನು ಹೇಳಿದನು.
ಯೇಸು ಅವನಿಗೆ, "ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ. ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು," ಎಂದು ಹೇಳಿದರು.
"ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ. ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ. ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,
ಕ್ರಿಸ್ತ ಯೇಸುವಿನ ಜನನವು
ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು. ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು. ಆಗ ಎಲ್ಲರೂ ತಮ್ಮ ಹೆಸರುಗಳನ್ನು ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಗಳಿಗೆ ಹೋದರು.
ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು. ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು.
Perspectiva divina
As nações são como uma gota no balde diante de Deus. Ele abre portas que nenhuma lei pode fechar.
ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ,
ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ.
ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ.
ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ,
ವ್ಯರ್ಥವಾಗಿಯೂ ಇವೆ.
ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.
ಆಗ ಪಿಲಾತನು ಯೇಸುವಿಗೆ, "ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?" ಎಂದು ಕೇಳಿದನು.
ಅದಕ್ಕೆ ಯೇಸು, "ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ," ಎಂದು ಉತ್ತರಕೊಟ್ಟರು.
Este artigo te tocou? Faça uma oração!
+581 estão orando agora.
Junte-se à corrente de oração.