Liberdade
Cristo nos libertou para a liberdade. A Bíblia proclama a libertação do pecado, da condenação e de toda forma de escravidão espiritual. Na verdade de Cristo, somos verdadeiramente livres.
Liberdade em Cristo
Para a liberdade Cristo nos libertou. Se o Filho vos libertar, verdadeiramente sereis livres. Não volteis ao jugo da escravidão.
ಕ್ರೈಸ್ತ ಸ್ವಾತಂತ್ರ್ಯ
ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
ಕ್ರೈಸ್ತ ಸ್ವಾತಂತ್ರ್ಯ
ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು" ಎಂದು ಹೇಳಿದನು.
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು" ಎಂದು ಹೇಳಿದನು.
Livres da condenação
Não há condenação para os que estão em Cristo Jesus. A lei do Espírito nos libertou da lei do pecado e da morte.
ಪವಿತ್ರಾತ್ಮನಿಂದ ನಡಿಸಲ್ಪಡುವ ಜೀವನ
ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
ಪವಿತ್ರಾತ್ಮನಿಂದ ನಡಿಸಲ್ಪಡುವ ಜೀವನ
ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು. ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ, ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ
ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
O Espírito liberta
Onde está o Espírito do Senhor, aí há liberdade. Olhe onde temos liberdade de acessar o trono da graça com confiança.
ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.
ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.
ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
"ಕರ್ತನ ಆತ್ಮವು ನನ್ನ ಮೇಲೆ ಅದೆ,
ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.
ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,
ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ
ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
"ಕರ್ತನ ಆತ್ಮವು ನನ್ನ ಮೇಲೆ ಅದೆ,
ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.
ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,
ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ
ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
ಚೀಯೋನಿಗೆ ರಕ್ಷಣೆಯ ವಾಗ್ದಾನಗಳು
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
Liberdade responsável
Fomos chamados à liberdade, mas não usemos a liberdade como pretexto para a carne. Tudo é lícito, mas nem tudo convém.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು," ಆದರೆ ಎಲ್ಲವು ಪ್ರಯೋಜನಕರವಲ್ಲ. "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು" ಆದರೆ ನಾನು ಯಾವುದಕ್ಕೂ ಅಧೀನನಲ್ಲ.
ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
A liberdade que permanece
Conhecer a verdade é o caminho da liberdade duradoura. Cristo nos resgatou e nos fez livres para viver em plenitude.
ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,
ಸರಾಗವಾಗಿ ನಡೆಯುವೆನು.
ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,
ಸರಾಗವಾಗಿ ನಡೆಯುವೆನು.
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,
ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ನಮ್ಮನ್ನು ರಕ್ಷಿಸುವ ದೇವರೇ,
ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು;
ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ;
ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ.
ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
"ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
"ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
ಯೇಸುವೇ ನಿಜವಾದ ದ್ರಾಕ್ಷಿಬಳ್ಳಿ
"ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು. ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ. ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು. ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
Este artigo te tocou? Faça uma oração!
+581 estão orando agora.
Junte-se à corrente de oração.