Materialismo
O materialismo é uma armadilha espiritual. A Bíblia alerta que o amor ao dinheiro é raiz de todos os males e nos chama a buscar tesouros no céu, não na terra.
O perigo das riquezas
Que aproveita ao homem ganhar o mundo inteiro e perder a sua alma? O materialismo engana e afasta do que realmente importa.
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?
ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.
ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.
ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.
Tesouros no céu
Ajuntai tesouros no céu, onde traça e ferrugem não consomem. O bom nome vale mais que muitas riquezas, e a sabedoria supera o ouro.
ಸ್ವರ್ಗದಲ್ಲಿ ನಿಕ್ಷೇಪ
"ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ.
ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.
ಯೇಸು ಅವನಿಗೆ, "ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು," ಎಂದು ಹೇಳಿದರು.
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ;
ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು!
ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.
ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ
ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.
Contentamento e generosidade
Grande ganho é a piedade com contentamento. A cobiça é idolatria, mas a generosidade traz alegria e bênção.
ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.
ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.
ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"
ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.
ಅನಂತರ ಯೇಸು ಜನರಿಗೆ, "ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ," ಎಂದರು.
ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು.
ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ.
ಇದೂ ಸಹ ವ್ಯರ್ಥವೇ.
ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ,
ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು.
ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು
ತೆಗೆದುಕೊಂಡು ಹೋಗುವುದಿಲ್ಲ.
O invisível acima do visível
As coisas que se veem são temporais; as que não se veem são eternas. Devemos fixar os olhos no que é permanente e verdadeiro.
ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.
ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ
ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ;
ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.
ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ.
ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು
ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.
ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ;
ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ.
ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ.
ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.
ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ, ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.
ವಿಶ್ವಾಸಿಗಳು ತಮಗಿದ್ದುದನ್ನು ಹಂಚಿಕೊಂಡದ್ದು
ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.