Mente
A mente é campo de batalha espiritual. A Bíblia nos chama a renovar o entendimento, pensar com sabedoria e buscar a mente de Cristo em todas as áreas da vida.
Amar a Deus com a mente
O maior mandamento inclui amar a Deus com toda a mente. A vida intelectual deve ser consagrada ao Senhor.
ಯೇಸು ಅವನಿಗೆ, " ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ.
ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ. ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.
ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.
Sabedoria e discernimento
A sabedoria é melhor que rubis. Quem a encontra, encontra a vida. A mente sábia discerne, planeja e previne erros.
ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು,
ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ;
ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.
ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ
ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.
ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ.
ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು.
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು;
ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.
ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ;
ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.
Construir sobre a rocha
Quem ouve as palavras de Jesus e as pratica é como o sábio que edificou sobre a rocha firme e inabalável.
"ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.
ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.
ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.
ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ,
ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ.