Milagres
Os milagres manifestam o poder soberano de Deus. Desde a criação até os sinais de Jesus e dos apóstolos, Deus intervém sobrenaturalmente na história para revelar sua glória e amor.
O Deus dos milagres
Para Deus nada é impossível. Ele abriu o mar, fez cair fogo do céu e ressuscitou mortos. Seu poder não tem limites.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, "ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, "ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ," ಎಂದು ಹೇಳಿದನು.
"ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು. ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.
ಯೆಹೋವ ದೇವರ ಕ್ರಿಯೆಗಳನ್ನು ಜ್ಞಾಪಕಮಾಡಿಕೊಳ್ಳುವೆನು.
ಹೌದು, ಆದಿಯಿಂದಲೂ ನೀವು ನಡೆಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.
ನಿಮ್ಮ ಮಹಾಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು,
ನಿಮ್ಮ ಕೃತ್ಯಗಳನ್ನು ಯೋಚಿಸುವೆನು."
ಅದ್ಭುತಗಳನ್ನು ಮಾಡುವ ದೇವರು ನೀವೇ.
ಜನರಲ್ಲಿ ನಿಮ್ಮ ಬಲವನ್ನು ತಿಳಿಯಮಾಡಿದ್ದೀರಿ.
Milagres pela fé
Se tiverdes fé como um grão de mostarda, movereis montanhas. A fé é a chave que acessa o poder miraculoso de Deus.
ಯೇಸು ಅವರಿಗೆ, "ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.
ಯೇಸು ಉತ್ತರವಾಗಿ ಅವರಿಗೆ, "ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.
ಆಗ ಯೇಸು ಅವನಿಗೆ, "ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, "ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ," ಎಂದರು.
ಅದಕ್ಕೆ ಯೇಸು, "ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ," ಎಂದು ಹೇಳಿದರು.
ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ.
Sinais e prodígios
Os apóstolos realizaram sinais e maravilhas em nome de Jesus. Os dons do Espírito incluem a operação de milagres e a fé sobrenatural.
"ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.
ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು. ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.
ನಾನು ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ, ಮಹತ್ಕಾರ್ಯಗಳನ್ನೂ ನಡೆಸುವುದರಲ್ಲಿ ಸರ್ವ ಸಹನೆಯಲ್ಲಿಯೂ ಸತ್ಯ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳನ್ನು ನಿಮ್ಮ ನಡುವೆ ತೋರಿಸಿದೆನು.
ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.
ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು, ಒಬ್ಬನಿಗೆ ಅದೇ ಆತ್ಮನಿಂದ ನಂಬಿಕೆಯು, ಮತ್ತೊಬ್ಬನಿಗೆ ಅದೇ ಆತ್ಮನಿಂದ ರೋಗ ವಾಸಿಮಾಡುವ ವರಗಳು ಕೊಡಲಾಗಿವೆ. ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.
ಅದಕ್ಕೆ ಯೇಸು, "ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು. ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ.
Milagres de cura e provisão
A oração da fé salvará o enfermo. Deus provê, cura e intervém quando clamamos a Ele com fé genuína.
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ. ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. ತಿರುಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಿಸಿತು.
ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
ಸಬ್ಬತ್ ದಿನದಲ್ಲಿ ಒಬ್ಬ ಸ್ತ್ರೀ ಗುಣವಾದದ್ದು
ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು, ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, "ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ," ಎಂದು ಹೇಳಿ, ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, "ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ," ಎಂದನು.
ಅದಕ್ಕೆ ಕರ್ತದೇವರು ಅವನಿಗೆ, "ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ? ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?" ಎಂದರು.
ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.
ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.
ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, "ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ," ಎಂದರು.
ಯೇಸು ಅವನಿಗೆ, "ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು," ಎಂದರು.
ಯೋಹಾನನು ಬರೆದ ಸುವಾರ್ತೆಯ ಉದ್ದೇಶ
ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ಶಿಷ್ಯರ ಮುಂದೆ ಮಾಡಿದರು. ಅವುಗಳು ಈ ಪುಸ್ತಕದಲ್ಲಿ ಬರೆದಿಲ್ಲ. ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.
ಆಗ ಮೊದಲು ಸಮಾಧಿಗೆ ಬಂದಿದ್ದ ಆ ಇನ್ನೊಬ್ಬ ಶಿಷ್ಯನು ಸಹ ಪ್ರವೇಶಿಸಿ, ಕಂಡು ನಂಬಿದನು. ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.
Discernimento nos sinais
A Bíblia alerta contra falsos milagres e sinais enganosos. Devemos provar os espíritos e não seguir sinais que desviam de Deus.
ಇತರ ದೇವರುಗಳನ್ನು ಆರಾಧಿಸುವುದು
ನಿಮ್ಮ ಮಧ್ಯೆ ಯಾವ ಪ್ರವಾದಿಯೇ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆ ಮಾಡಿ, "ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ," ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು. ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ. ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.
ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು. ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.
ಯೋನನ ಸೂಚಕಕಾರ್ಯವು
ಆಗ ನಿಯಮ ಬೋಧಕರೂ ಫರಿಸಾಯರೂ, "ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ," ಎಂದು ಕೇಳಿದರು.
ಯೇಸು ಉತ್ತರವಾಗಿ ಅವರಿಗೆ, "ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ. ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.
ಮಾನಸಾಂತರ ಪಡದ ಊರುಗಳನ್ನು ಗದರಿಸಿದ್ದು
ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ, "ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು. ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು. ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು. ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ," ಎಂದರು.
A criação como milagre
O próprio corpo humano é milagre de Deus. Toda a criação testifica do poder e da sabedoria do Criador.
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ;
ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.
ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು;
ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.
ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು: "ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು." ಈ ಹೆಸರಿನ ಅರ್ಥ, "ದೇವರು ನಮ್ಮ ಸಂಗಡ ಇದ್ದಾರೆ," ಎಂಬುದು.
ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು. ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು.
ಕೂಡಲೇ ಯೇಸು ಅವರಿಗೆ, "ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ," ಎಂದರು.
ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, "ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು," ಎಂದು ಹೇಳಿದರು.
ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು:
"ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!"
"ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!"
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.
ಮಿಡತೆಗಳ ಉಪದ್ರವ
ತರುವಾಯ ಯೆಹೋವ ದೇವರು ಮೋಶೆಗೆ, "ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ. ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು," ಎಂದು ಹೇಳಿದರು.