Publicidade

Misericórdia

Por Bíblia Online

A misericórdia de Deus é eterna e inesgotável. Ele se compadece dos que sofrem, perdoa os arrependidos e derrama graça sobre os que não merecem. Grande é a sua fidelidade.

A misericórdia de Deus

Quem é Deus como tu, que perdoa a iniquidade? Ele se deleita em ter misericórdia e não retém a ira para sempre.

ನಿನಗೆ ಯಾವ ದೇವರು ಸಮಾನ?

ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ,

ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ.

ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ.

ಕರುಣೆಯೇ ಆತನಿಗೆ ಇಷ್ಟ.

ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು;

ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.

ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;

ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.

ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ,

ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.

ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ,

ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.

ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

ಕರ್ತನೇ, ನನ್ನ ಮೊರೆಯನ್ನು ಕೇಳು;

ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.

ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;

ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.

ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.

ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ತಂದೆಯು ಮಕ್ಕಳನ್ನು ಕನಿಕರಿಸುವಂತೆ,

ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.

Graça e perdão

Onde o pecado abundou, superabundou a graça. Deus convida todos ao arrependimento e promete perdão total aos que confessam.

ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.

ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.

ಅದಕ್ಕಾತನು, "ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ" ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು,

ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.

ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;

ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;

ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.

ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು;

ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

Misericórdia e compaixão

Misericórdia quero e não sacrifício. Deus nos chama a ser misericordiosos como Ele é, perdoando e acolhendo o próximo.

ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು" ಅಂದನು.

ಆಗ ಪೇತ್ರನು ಆತನ ಬಳಿಗೆ ಬಂದು, "ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?" ಎಂದು ಕೇಳಿದನು. ಯೇಸು ಅವನಿಗೆ, "ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.

ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.

ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.

ದಯಾಳುವಾಗಿ ಧನಸಹಾಯ ಮಾಡುವವನೂ,

ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ.

ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು;

ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.

Acessar a misericórdia

Cheguemos com confiança ao trono da graça. Ali encontramos misericórdia e graça para socorro no tempo oportuno.

ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.

ಪಸ್ಕಾಚರಣೆಗೆ ಸಿದ್ಧತೆ

ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು. ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ ಅವರು, "ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು" ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.

ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: "ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು. ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು. ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ."

ಪಸ್ಕ ಆಚರಣೆ

ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು. ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು. ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, "ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು" ಎಂದು ವಿಜ್ಞಾಪನೆ ಮಾಡಿದನು. ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು. ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು. ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು. ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು. ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು. ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು. ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು. ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

ಇಸ್ರಾಯೇಲಿನ ವಿಶ್ವಾಸಘಾತ

ಯೆಹೋವನು ಹೀಗೆನ್ನುತ್ತಾನೆ, "ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ?

ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?

ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?

ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ;

ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.

ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.

ಈಗ ನನ್ನನ್ನು, ‘ನನ್ನ ತಂದೆ, ನನ್ನ ಯೌವನದ ಆಪ್ತನು’ ಎಂದು ಕರೆಯುತ್ತೀಯಲ್ಲಾ.

‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ." ಎಂಬುದೇ.

ಭ್ರಷ್ಟಳಾದ ಇಸ್ರಾಯೇಲಿನ ಪಾಪಕ್ಕಿಂತ ದ್ರೋಹಿಯಾದ ಯೆಹೂದದ ಪಾಪವು ಹೆಚ್ಚು

ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, "ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ. ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು. ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು. ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು. ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ" ಎಂಬುದೇ ಯೆಹೋವನಾದ ನನ್ನ ನುಡಿ.

ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, "ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ. ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.

ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.

ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು" ಇದು ಯೆಹೋವನ ನುಡಿ.

ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.

ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.

ಪಶ್ಚಾತ್ತಾಪ ಪಡುವ ತನ್ನ ಜನರನ್ನು ಯೆಹೋವನು ಸ್ವೀಕರಿಸುವನು

"ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.

ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ" ಎಂದು ಯೆಹೋವನು ನುಡಿಯುತ್ತಾನೆ.

ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.

"ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು" ಎಂದು ಯೆಹೋವನು ನುಡಿಯುತ್ತಾನೆ.

ಅದಕ್ಕೆ ಜನರು, "ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.

ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.

ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ

ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.

ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ.

ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ" ಎಂದು ಮೊರೆಯಿಡುತ್ತಾರೆ.

Publicidade
Bíblia Online Bíblia Online

Bíblia Online • Versão: 2026-06-20_17-16-08-