Misericórdia
A misericórdia de Deus é eterna e inesgotável. Ele se compadece dos que sofrem, perdoa os arrependidos e derrama graça sobre os que não merecem. Grande é a sua fidelidade.
A misericórdia de Deus
Quem é Deus como tu, que perdoa a iniquidade? Ele se deleita em ter misericórdia e não retém a ira para sempre.
ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ,
ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ,
ನಿನ್ನ ಹಾಗೆ ಇರುವ ದೇವರು ಯಾರು?
ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ.
ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.
ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ
ನನ್ನನ್ನು ಕರುಣಿಸಿರಿ.
ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ
ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ;
ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.
ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ,
ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.
ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ,
ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ.
ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ
ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.
ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.
ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ.
ನನ್ನ ಕೂಗಿಗೆ ಕರುಣೆ ತೋರಿಸಿ,
ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.
ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ;
ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
ನಿಶ್ಚಯವಾಗಿ ಶುಭವೂ ಪ್ರೀತಿಯೂ
ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ;
ನಾನು ಯೆಹೋವ ದೇವರ ಮನೆಯಲ್ಲಿ
ಸದಾಕಾಲವೂ ವಾಸಿಸುವೆನು.
ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ,
ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.
Graça e perdão
Onde o pecado abundou, superabundou a graça. Deus convida todos ao arrependimento e promete perdão total aos que confessam.
ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?
ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!
ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು. ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.
ಅದಕ್ಕೆ ಕರ್ತ ಯೇಸು, "ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು," ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.
ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
ದುಷ್ಟನು ತನ್ನ ದುರ್ಮಾರ್ಗವನ್ನೂ,
ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು,
ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು.
ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.
ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು.
ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು.
ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ.
ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
Misericórdia e compaixão
Misericórdia quero e não sacrifício. Deus nos chama a ser misericordiosos como Ele é, perdoando e acolhendo o próximo.
ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ," ಎಂದು ಹೇಳಿದರು.
ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, "ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?" ಎಂದು ಕೇಳಿದನು.
ಅದಕ್ಕೆ ಯೇಸು, "ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.
ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.
ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು;
ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.
ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ.
ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ.
ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.
Acessar a misericórdia
Cheguemos com confiança ao trono da graça. Ali encontramos misericórdia e graça para socorro no tempo oportuno.
ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.
ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು. ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು. ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು. ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು. ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ,
"ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು. ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು. ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ," ಎಂದು ಹೇಳಿದರು.
ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು. ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, "ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ, ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ," ಎಂದು ವಿಜ್ಞಾಪನೆ ಮಾಡಿದನು. ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು. ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು. ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ. ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.
"ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ,
ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ,
ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ,
ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ?
ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ.
ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?"
ಎಂದು ಯೆಹೋವ ದೇವರು ಹೇಳುತ್ತಾರೆ.
"ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು.
ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?
ಮರುಭೂಮಿಯಲ್ಲಿ ಅರಬೀಯನ ಹಾಗೆ
ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ.
ಹೀಗೆ ನಿನ್ನ ವೇಶ್ಯೆತನಗಳಿಂದಲೂ,
ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.
ಆದ್ದರಿಂದ ಮಳೆಗಳು ನಿಂತುಹೋದವು,
ಹಿಂಗಾರೇ ಆಗಲಿಲ್ಲ.
ವೇಶ್ಯೆಯ ನೋಟ ನಿನಗಿತ್ತು.
ನಾಚುವುದನ್ನು ನಿರಾಕರಿಸಿದೆ.
ಈಗಲೂ ನನಗೆ, ‘ನನ್ನ ತಂದೆಯೇ,
ನನ್ನ ಯೌವನದ ಸ್ನೇಹಿತನು ನೀನೇ,’
ಎಂದು ನೀನು ಕರೆಯುತ್ತಿರುವೆ.
ಆತನು ನಿತ್ಯ ಕೋಪಮಾಡುವವನೋ?
ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?
ಇಗೋ, ನೀನು ಹೀಗೆ ಮಾತನಾಡಿದರೇನು?
ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ."
ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: "ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು. ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ," ಎಂದು ಯೆಹೋವ ದೇವರು ನುಡಿಯುತ್ತಾರೆ.
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: "ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು.
" ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’
ಎಂದು ಯೆಹೋವ ದೇವರು ಕರೆಯುತ್ತಾರೆ.
‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ.
ಏಕೆಂದರೆ ನಾನು ಕರುಣಾಸಾಗರನು,’
ಎಂದು ಯೆಹೋವ ದೇವರು ಹೇಳುತ್ತಾರೆ.
‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.
ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ,
ಒಂದೊಂದು ಹಸುರು ಮರದ ಕೆಳಗೆ
ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ,
ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ
ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ "
ಎಂದು ಯೆಹೋವ ದೇವರು ಹೇಳುತ್ತಾರೆ.
"ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ," ಎಂದು ಯೆಹೋವ ದೇವರು ನುಡಿಯುತ್ತಾರೆ. "ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು. ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು. ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ. ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು. ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು."
ಯೆಹೋವ ದೇವರು ಹೇಳುವುದೇನೆಂದರೆ:
"ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ,
ನಿನಗೆ ಮನೋಹರವಾದ ನಾಡನ್ನು ಎಂದರೆ,
ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ.
ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ,
ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.
ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ,
ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,"
ಎಂದು ಯೆಹೋವ ದೇವರು ಹೇಳುತ್ತಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು.
ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ.
ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ,
ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.
"ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ;
ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು."
"ಇಗೋ, ನಿಮ್ಮ ಬಳಿಗೆ ಬರುತ್ತೇವೆ,
ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.
ನಿಶ್ಚಯವಾಗಿ ಗುಡ್ಡಗಳಿಂದಲೂ,
ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ.
ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು
ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.
ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ
ನಮ್ಮ ತಂದೆಗಳ ಕಷ್ಟವನ್ನೂ,
ಅವರ ಕುರಿಗಳನ್ನೂ, ಅವರ ದನಗಳನ್ನೂ,
ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ.
ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ.
ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ
ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ
ವಿರೋಧವಾಗಿ ಪಾಪಮಾಡಿದ್ದೇವೆ.
ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ."