Morte de Jesus
A morte de Jesus é o sacrifício supremo do amor de Deus. Na cruz, o Cordeiro de Deus carregou os pecados do mundo, satisfez a justiça divina e abriu o caminho da salvação para todos.
O sacrifício na cruz
Jesus disse: 'Está consumado!' Na cruz, Ele cumpriu toda a lei, pagou o preço do pecado e reconciliou a humanidade com Deus.
ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, "ನನಗೆ ನೀರಡಿಕೆಯಾಗಿದೆ" ಎಂದರು. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥವನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಯೇಸುವಿನ ಬಾಯಿಗೆ ಇಟ್ಟರು. ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, "ತೀರಿತು" ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
ಆದ್ದರಿಂದ ಅವರು, "ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ," ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ,
"ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು.
ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,"
ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.
ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, "ಅಮ್ಮಾ, ಇಗೋ, ನಿನ್ನ ಮಗನು," ಎಂದರು. ಆಮೇಲೆ ಯೇಸು ಆ ಶಿಷ್ಯನಿಗೆ, "ಇಗೋ, ನಿನ್ನ ತಾಯಿಯು," ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.
ಅವರು "ತಲೆಬುರುಡೆಯ ಸ್ಥಳ" ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು. ಆಗ ಯೇಸು, "ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು," ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.
ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, "ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ," ಎಂದರು.
ಸೈನಿಕರು ಸಹ ಯೇಸುವಿನ ಬಳಿಗೆ ಬಂದು ಅವರನ್ನು ಹಾಸ್ಯಮಾಡಿ ಯೇಸುವಿಗೆ ಹುಳಿರಸವನ್ನು ಕೊಟ್ಟು, "ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ," ಎಂದರು.
ಯೇಸುವಿನ ಶಿಲುಬೆಯ ಮೇಲ್ಗಡೆಯಲ್ಲಿ ಒಂದು ಲಿಖಿತ ಹೀಗಿತ್ತು:
ಈತನು ಯೆಹೂದ್ಯರ ಅರಸನು.
ಶಿಲುಬೆಗೆ ಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, "ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು, ನಮ್ಮನ್ನೂ ರಕ್ಷಿಸು," ಎಂದು ಯೇಸುವನ್ನು ದೂಷಿಸಿದನು.
ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, "ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ? ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ," ಎಂದನು.
ಬಳಿಕ ಅವನು, "ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ," ಎಂದನು.
ಆಗ ಯೇಸು ಅವನಿಗೆ, "ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ," ಎಂದರು.
ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಮೂರು ಗಂಟೆಯ ಸಮಯದಲ್ಲಿ ಯೇಸು, "ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?" ಎಂದರೆ, "ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?" ಎಂದು ಮಹಾಧ್ವನಿಯಿಂದ ಕೂಗಿದರು.
ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು. ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು. ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, "ನಿಜವಾಗಿಯೂ ಈತನು ದೇವಪುತ್ರನಾಗಿದ್ದನು," ಎಂದರು.
ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.
ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು.
ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು.
ಆತನ ಗಾಯಗಳಿಂದ ನಮಗೆ ಗುಣವಾಯಿತು.
ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು.
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು.
ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು
ಆತನ ಮೇಲೆ ಹಾಕಿದರು.
ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು.
ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ,
ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ
ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;
ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ;
ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ;
ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.
ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲು ಮಾಡಿಕೊಳ್ಳುತ್ತಾರೆ;
ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
ನನ್ನನ್ನು ನೋಡುವವರೆಲ್ಲರೂ ನನ್ನನ್ನು ಗೇಲಿಮಾಡುತ್ತಾರೆ.
ಅವರು ತಲೆ ಆಡಿಸುತ್ತಾ ಹೀಗೆ ಅವಮಾನಪಡಿಸುತ್ತಾರೆ:
"ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ,
ಯೆಹೋವ ದೇವರೇ ಆತನನ್ನು ಕಾಪಾಡಲಿ.
ಯೆಹೋವ ದೇವರು ಆತನಲ್ಲಿ ಹರ್ಷಿಸುವುದಾದರೆ,
ಅವರೇ ಆತನನ್ನು ಬಿಡಿಸಲಿ."
O amor que se entrega
Ninguém tem maior amor do que aquele que dá a vida pelos amigos. Deus prova seu amor em que Cristo morreu por nós quando ainda éramos pecadores.
ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?
ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.
ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ
ತಮ್ಮನ್ನು ತಾವೇ ತಗ್ಗಿಸಿಕೊಂಡು
ಮರಣವನ್ನು ಎಂದರೆ ಶಿಲುಬೆಯ
ಮರಣವನ್ನೂ ಹೊಂದುವಷ್ಟು ವಿಧೇಯರಾದರು.
Morte e ressurreição
Jesus morreu e ressuscitou, e a morte não mais tem domínio sobre Ele. Pelo batismo, participamos de sua morte e ressurreição.
ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ. ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.
ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ? ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ. ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.
"ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ. ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ. ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.
"ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.