Morte
A morte é a realidade que todos enfrentam, mas para o cristão ela não é o fim. A Bíblia ensina que Cristo venceu a morte e nos dá a esperança da ressurreição e da vida eterna.
Cristo venceu a morte
Onde está, ó morte, o teu aguilhão? Cristo destruiu o poder da morte e nos deu a vitória pela ressurreição.
"ಓ ಮರಣವೇ, ನಿನ್ನ ಜಯವು ಎಲ್ಲಿ?
ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?"
ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ. ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ.
ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು.
ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.
ಇದು ನಂಬತಕ್ಕ ವಾಕ್ಯವಾಗಿದೆ:
ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ,
ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.
ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.
A esperança da vida eterna
Jesus disse: 'Eu sou a ressurreição e a vida.' Quem crê nele não está morto, mas apenas adormecido — e um dia despertará para a glória.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು. ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?" ಎಂದು ಕೇಳಿದ್ದಕ್ಕೆ,
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು. ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?" ಎಂದು ಕೇಳಿದ್ದಕ್ಕೆ,
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಪುನರುತ್ಥಾನದ ನಿರೀಕ್ಷೆ
ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ. ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.
ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.
Não temas a morte
Não temas os que matam o corpo. Para o cristão, viver é Cristo e morrer é lucro. O vale da sombra da morte não assusta quem caminha com o Pastor.
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು. ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು. ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ಬದುಕಿದರೆ ನಾವು ಕರ್ತನಿಗಾಗಿ ಬದುಕುತ್ತೇವೆ, ಸತ್ತರೆ ಕರ್ತನಿಗಾಗಿ ಸಾಯುತ್ತೇವೆ. ಹೀಗೆ ನಾವು ಬದುಕಿದರೂ ಸತ್ತರೂ ಕರ್ತನಿಗೆ ಸೇರಿದವರಾಗಿರುತ್ತೇವೆ.
A eternidade nos aguarda
Deus enxugará toda lágrima. A morte será o último inimigo destruído. Para os salvos, a morte é a porta de entrada na presença eterna de Deus.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.
‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.
ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.
ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು. ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
A morte na perspectiva bíblica
Há tempo de nascer e tempo de morrer. A morte é realidade humana, mas Deus é Senhor tanto dos vivos quanto dos mortos.
ಜ್ಞಾನ
ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ.
ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.
ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ.
ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ
ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.
ಕತ್ತಲೆಯಲ್ಲಿ ನಡೆಯುವ ಈ ಜನರಿಗೆ
ಮಹಾ ಬೆಳಕು ಕಾಣಿಸಿತು,
ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ
ಬೆಳಕು ಉದಯಿಸಿತು.
ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ," ಎಂದು ಹೇಳಿದರು.
ಮರಣವನ್ನು ಕಾಣದೆ ಬದುಕುವಂಥವರು ಯಾರು?
ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು?
ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ?
ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ?
ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ;
ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ.
ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ.
ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ.
ಪ್ರೀತಿಯು ಮರಣದಷ್ಟು ಬಲವಾಗಿದೆ.
ಮತ್ಸರವು ಸಮಾಧಿಯಷ್ಟು ಕ್ರೂರ.
ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ
ಜ್ವಾಲೆಯ ಹಾಗಿರುವುದು.
"ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.
ಯೇಸು ಮಹಾಧ್ವನಿಯಿಂದ, "ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ," ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.
ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು. ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.