Mundo
A Bíblia tem muito a dizer sobre o mundo e nossa relação com ele. Cristãos estão no mundo, mas não são do mundo — chamados a ser luz e sal sem se conformar com os padrões seculares.
Não ameis o mundo
Não ameis o mundo nem o que nele há. A cobiça da carne, a cobiça dos olhos e a soberba da vida não vêm do Pai, mas do mundo.
ಲೋಕವನ್ನು ಪ್ರೀತಿಸಬೇಡಿರಿ
ಲೋಕವನ್ನಾಗಲಿ, ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ಲೋಕವನ್ನು ಪ್ರೀತಿಸಬೇಡಿರಿ
ಲೋಕವನ್ನಾಗಲಿ, ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.
ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.
ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.
ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.
ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.
O amor de Deus pelo mundo
Porque Deus amou o mundo de tal maneira que deu seu Filho. O mesmo mundo que rejeita a Deus é amado por Ele e objeto de sua redenção.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
Vencer o mundo
Jesus venceu o mundo e nos dá sua paz e vitória. A fé é a vitória que vence o mundo — e aquele que nasceu de Deus o vence.
"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.
"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.
ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.
No mundo sem ser do mundo
Jesus orou: não peço que os tires do mundo, mas que os guardes do mal. Somos enviados ao mundo como embaixadores do Reino.
ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು. ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
"ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ. ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು," ಎಂದರು.
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.
ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
ಲೋಕವು ಶಿಷ್ಯರನ್ನು ದ್ವೇಷಿಸುತ್ತದೆ
"ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ. ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
Sal e luz
Vós sois o sal da terra e a luz do mundo. O cristão transforma o ambiente onde está, sem se conformar com os padrões mundanos.
ಉಪ್ಪು ಮತ್ತು ಬೆಳಕು
"ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
"ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.
ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!
ಯೇಸು ಅವರಿಗೆ, "ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.
ಯೇಸು ಅವರಿಗೆ, "ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?
Não se conformar
Não vos conformeis com este mundo. A religião pura é guardar-se da corrupção do mundo e viver segundo o Espírito de Deus.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.
ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.
ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.
ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.
ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.
A batalha espiritual
A nossa luta não é contra carne e sangue. Os poderes do mundo são reais, mas o que está em nós é maior que o que está no mundo.
ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.
ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.
ನಾವು ಈ ಲೋಕದಲ್ಲಿ ಜೀವಿಸುವವರಾದರೂ, ನಾವು ಲೋಕದವರಂತೆ ಹೋರಾಟ ಮಾಡುವವರಲ್ಲ.
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.
ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ? ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.
ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿರುವುದಿಲ್ಲ.
ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.
ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.
ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.
Pertencemos a Deus
Do Senhor é a terra e tudo o que nela existe. Vivemos neste mundo como peregrinos, desejando a pátria celestial.
ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ;
ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.
ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ
ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.
ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು.
ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.
ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ;
ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ,
ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ
ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.
ಯೆಹೋವ ದೇವರು ಸದಾ ಆಳುವವರು;
ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.
ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು;
ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.
ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು. ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.
ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.
ಯೇಸುವಿನ ಕುರಿತಾಗಿ ತಂದೆಯ ಸಾಕ್ಷಿ
ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, "ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು," ಎಂದು ಹೇಳಿದರು.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು. ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು. ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು, "ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?" ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು. ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ. ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು. ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.
ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.
ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ,
ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು,
ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು.
ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.
ನನ್ನ ಪ್ರಿಯರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.
ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ;
ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.
ಸೂರ್ಯನು ಉದಯಿಸುತ್ತಾನೆ, ಸೂರ್ಯನು ಮುಳುಗುತ್ತಾನೆ.
ತಾನು ಉದಯಿಸುವ ಸ್ಥಳಕ್ಕೆ ಆತುರದಿಂದ ಹಿಂದಿರುಗುತ್ತಾನೆ.
ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ.
ಉತ್ತರದ ಕಡೆಗೆ ತಿರುಗುತ್ತದೆ.
ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ.
ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.
ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ.
ಆದರೂ ಸಮುದ್ರವು ತುಂಬುವುದಿಲ್ಲ.
ನದಿಗಳು ಎಲ್ಲಿಂದ ಬಂದಿವೆಯೋ,
ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ.
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.
ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, "ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು," ಎಂದು ಹೇಳಿದರು.
ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!
ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.