Não desista!
'Não desista!' é o grito do céu para a terra. Deus nos encoraja a perseverar na fé, na oração e na esperança, porque a vitória pertence aos que não se rendem.
Força na fraqueza
Os que esperam no Senhor renovam as forças. Deus não se cansa nem se fatiga — Ele dá poder aos fracos e vigor aos cansados.
ನಿನಗೆ ಗೊತ್ತಿಲ್ಲವೋ?
ನೀನು ಕೇಳಲಿಲ್ಲವೋ?
ಯೆಹೋವ ದೇವರು ನಿರಂತರವಾದ ದೇವರೂ,
ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವುದಿಲ್ಲ,
ಬಳಲುವುದಿಲ್ಲ, ಆತನ ತಿಳುವಳಿಕೆಯು
ಪರಿಶೋಧನೆಗೆ ಅಗಮ್ಯ.
ಆತನು ದಣಿದವನಿಗೆ ಶಕ್ತಿಯನ್ನೂ,
ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಯೌವನಸ್ಥರೋ ದಣಿದು ಬಳಲುವರು
ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.
ಇಸ್ರಾಯೇಲರ ಒಬ್ಬನೇ ರಕ್ಷಕ
ಈಗಲಾದರೋ ಯಾಕೋಬನ ವಂಶವೇ,
ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ,
ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ:
"ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ,
ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
ನೀನು ಜಲರಾಶಿಯನ್ನು ದಾಟಿಹೋಗುವಾಗ,
ನಾನು ನಿನ್ನೊಂದಿಗಿರುವೆನು;
ನದಿಗಳನ್ನು ನೀನು ದಾಟುವಾಗ,
ಅವು ನಿನ್ನನ್ನು ಮುಳುಗಿಸುವುದಿಲ್ಲ;
ಬೆಂಕಿಯಲ್ಲಿ ನಡೆಯುವಾಗ,
ನೀನು ಸುಟ್ಟುಹೋಗುವುದಿಲ್ಲ;
ಜ್ವಾಲೆಯು ನಿನ್ನನ್ನು ದಹಿಸದು.
ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ
ನಿನ್ನ ದೇವರಾದ ಇಸ್ರಾಯೇಲಿನ ಪರಿಶುದ್ಧನೂ, ನಿನ್ನ ರಕ್ಷಕನೂ ಆಗಿದ್ದೇನೆ.
ಈಜಿಪ್ಟನ್ನು ನಿನ್ನ ವಿಮೋಚನೆಗೂ,
ಇಥಿಯೋಪಿಯ ಮತ್ತು ಸೆಬಾ ಸೀಮೆಗಳನ್ನು ನಿನಗೋಸ್ಕರ ಕೊಟ್ಟಿದ್ದೇನೆ.
ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ. ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ. ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು. ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.
Perseverança na fé
Não perca a confiança, pois ela tem grande recompensa. O justo viverá pela fé, e quem perseverar até o fim será salvo.
ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.
ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು. ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ. ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.
ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.
ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.
ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.
Deus é refúgio
O Senhor é nosso refúgio e fortaleza. Ele ouve nossas orações, nos consola nas tribulações e transforma choro em dança.
ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;
ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ.
ಅವರು ನಿಮಗೆ ಆಧಾರವಾಗಿರುವರು.
ದೇವರು ಎಂದೆಂದಿಗೂ
ನೀತಿವಂತನನ್ನು ಕದಲಗೊಡಿಸುವುದಿಲ್ಲ.
ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು,
ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.
ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು,
ಏಕೆಂದರೆ ಯೆಹೋವ ದೇವರೇ,
ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.
ಕಣ್ಣೀರಿನಿಂದ ಬಿತ್ತುವವರು,
ಆನಂದ ಗೀತದೊಡನೆ ಕೊಯ್ಯುವರು;
ಬಿತ್ತಲು ಬೀಜವನ್ನು ಹೊತ್ತುಕೊಂಡು
ಅಳುತ್ತಾ ಹೋಗುವವರು,
ತಮ್ಮ ಸಿವುಡುಗಳನ್ನು ಹೊತ್ತುಕೊಂಡು
ಆನಂದ ಗೀತದೊಡನೆ ತಿರುಗಿ ಬರುವರು.
ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ;
ನಿಮ್ಮ ಹೃದಯವು ಧೈರ್ಯದಿಂದ ಇರಲಿ.
ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ
ನನ್ನ ದಾರಿಗೆ ಬೆಳಕೂ ಆಗಿದೆ.
ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ,
ಅವರು ಅವರಿಗೆ ಸಮೀಪವಾಗಿದ್ದಾರೆ.
ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ.
ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.
Vitória em Cristo
Jesus venceu o mundo e nos dá vitória. Para Deus nada é impossível, e Ele faz infinitamente mais do que pedimos ou pensamos.
"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.
ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.
ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, "ನೀವು ಸಹ ಹೋಗಬೇಕೆಂದು ಇದ್ದೀರಾ?" ಎಂದು ಕೇಳಲು,
ಸೀಮೋನ್ ಪೇತ್ರನು ಯೇಸುವಿಗೆ, "ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ. ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ," ಎಂದನು.
ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.
ಬೇಡಿರಿ, ಹುಡುಕಿರಿ, ತಟ್ಟಿರಿ
"ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
"ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ. ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ," ಎಂದು ಹೇಳಿದರು.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, "ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ," ಎಂದು ಹೇಳಿದನು.
Esperança e transformação
O Senhor completa a boa obra que começou em nós. Ele faz novas todas as coisas e dá esperança para o futuro.
ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ನೂತನ ಆಕಾಶ ಮತ್ತು ನೂತನ ಭೂಮಿ
ತರುವಾಯ, "ನೂತನ ಆಕಾಶವನ್ನೂ ನೂತನ ಭೂಮಿಯನ್ನೂ" ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.
ಯೆಹೋವ ದೇವರು ಒಳ್ಳೆಯವರು.
ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ.
ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು," ಎಂದನು.
Permanecendo firme
Persevere na oração, firme-se na Palavra e fortaleça-se na graça de Cristo. A fé vem pelo ouvir, e o ouvir pela Palavra de Deus.
ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ. ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.
ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.
ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, "ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ," ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ. ನಿನಗೆ ಒಪ್ಪಿಸಲಾಗಿರುವ ಆ ಒಳ್ಳೆಯದನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮ ದೇವರ ಮೂಲಕ ನೀನು ಕಾಪಾಡು.
ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ, ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ. ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.