Nem só de pão vive o homem
'Nem só de pão vive o homem' — essa declaração de Jesus ao diabo no deserto revela que a Palavra de Deus é o verdadeiro alimento que sustenta a vida em plenitude.
O verdadeiro alimento
Quando tentado a transformar pedras em pão, Jesus respondeu com a Escritura: a vida humana depende de toda palavra que sai da boca de Deus.
ಅದಕ್ಕೆ ಯೇಸು, "ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’" ಎಂದರು.
ಸೈತಾನನು ಯೇಸುವಿಗೆ, "ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು," ಎಂದನು.
ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, " ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ," ಎಂದರು.
ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.
Jesus, o pão vivo
Jesus é o pão da vida que desceu do céu. Quem come deste pão viverá para sempre. Ele é o sustento que satisfaz a fome da alma.
ಯೇಸು ಅವರಿಗೆ, "ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
ನಾನೇ ಜೀವದ ರೊಟ್ಟಿ.
ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ," ಎಂದರು.
ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು. ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು," ಎಂದರು.
Buscar o Reino acima de tudo
Não andeis ansiosos pelo que comer ou beber. Buscai primeiro o Reino de Deus, e todas estas coisas vos serão acrescentadas.
ಚಿಂತಿಸಬೇಡಿರಿ
"ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?
ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ. ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ. ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.
ಆ ಸಮಯದಲ್ಲಿ ಶಿಷ್ಯರು, "ಗುರುವೇ ಊಟಮಾಡಿರಿ," ಎಂದು ಯೇಸುವನ್ನು ಕೇಳಿಕೊಂಡರು.
ಆದರೆ ಯೇಸು ಅವರಿಗೆ, "ನಿಮಗೆ ತಿಳಿಯದಿರುವ ಆಹಾರವು ನನ್ನಲ್ಲಿದೆ," ಎಂದರು.
ಶಿಷ್ಯರು, "ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?" ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಯೇಸು ಅವರಿಗೆ, "ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
ಅಂಜೂರದ ಗಿಡವು ಚಿಗುರದಿದ್ದರೂ,
ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ,
ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ,
ಹೊಲಗಳು ಆಹಾರ ಕೊಡದಿದ್ದರೂ,
ಕುರಿಹಟ್ಟಿಗಳು ಬರಿದಾಗಿ ಹೋದರೂ,
ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು.
ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.
ಸಾರ್ವಭೌಮ ಯೆಹೋವ ದೇವರು ನನ್ನ ಬಲವು.
ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ,
ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.